Home ರಾಜ್ಯ ರಾಜ್ಯೋತ್ಸವದಂದೇ ಕಲಬುರ್ಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: ಬಂಧನ

ರಾಜ್ಯೋತ್ಸವದಂದೇ ಕಲಬುರ್ಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: ಬಂಧನ

ಲಬುರ್ಗಿ : ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಡೀ ರಾಜ್ಯದ್ಯಂತ ಸಡಗರ ಸಂಭ್ರಮ ಮನೆ ಮಾಡಿದೆ ಆದರೆ ಇದರ ಮಧ್ಯ ಕಲ್ಬುರ್ಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬಂದಿದ್ದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತಿಸಿರುವ ಘಟನೆ ನಡೆದಿದೆ.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ವತಿಯಿಂದ ಪ್ರತ್ಯೇಕ ರಾಜ್ಯಕ್ಕೆ ಅಗ್ರಹಿಸಿ ಧ್ವಜಾರೋಹಣಕ್ಕೆ ಯತ್ನಿಸಲಾಗಿದೆ.

ಸಮಿತಿ ಅಧ್ಯಕ್ಷ ಎಮ್‌ಎಸ್ ಪಾಟೀಲ್ ನೇತೃತ್ವದಲ್ಲಿ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದ 20 ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Join Whatsapp
Exit mobile version