ವಿಟ್ಲದ ಕಡಂಬುನಲ್ಲಿ ಪೊಲೀಸರ ಕೊಲೆ ಯತ್ನ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ

Prasthutha|

ಮಂಗಳೂರು: ವಿಟ್ಲದ ಕಡಂಬು ಎಂಬಲ್ಲಿ  2 ಕೋಮುಗಳ ಜನರು ಅಕ್ರಮ ಗುಂಪು ಸೇರಿ ಪೊಲೀಸರಿಗೆ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ.

- Advertisement -

ಈ ಬಗ್ಗೆ  25-01-2019 ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ  ಪ್ರಕರಣ  ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ದಕ್ಷಿಣ ಕನ್ನಡ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಲ್ಲಾ ಆರೋಪಿತರನ್ನು ಖುಲಾಸೆಗೊಳಿಸಿ  ಸೋಮವಾರ ತೀರ್ಪು ಪ್ರಕಟಿಸಿದೆ.

- Advertisement -

ಈ ಪ್ರಕರಣದಲ್ಲಿ ಆರೋಪಿ ಸಂಖ್ಯೆ  12ರಿಂದ  22 ಆರೋಪಿತರ ಪರವಾಗಿ ಲೆಕ್ಸ್ ಜ್ಯೂರಿಸ್ ಲಾ ಚೇಂಬರ್ ಮಂಗಳೂರಿನ ವಕೀಲರಾದ ಉಮರ್ ಫಾರೂಕ್ ಮುಲ್ಕಿ, ಹೈದರ್ ಅಲಿ ಕಿನ್ನಿಗೋಳಿ, ಇರ್ಷಾದ್ ಮೊಂಟೆಪದವು ವಾದಿಸಿದ್ದರು.

Join Whatsapp