ಬಾರ್ ಕ್ಯಾಷಿಯರ್​​ ಮರ್ಡರ್​ ಕೇಸ್ : ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

Prasthutha|

ಶಿವಮೊಗ್ಗ: ಬಾರ್ ಕ್ಯಾಷಿಯರ್​​ ಮರ್ಡರ್​ ಕೇಸ್​ಗೆ ಸಂಬಂಧಿಸಿದಂತೆ ಕೊಲೆ ಆರೋಪಿ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದು, ಕಾಲಿಗೆ ಫೈರಿಂಗ್​ ಮಾಡಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

- Advertisement -

ಸತೀಶ್​​ ಬಂಧಿತ ಆರೋಪಿ. ಶಿವಮೊಗ್ಗ ತಾಲ್ಲೂಕಿನ ಆಯನೂರಿನಲ್ಲಿ ಬಾರ್ ಕ್ಯಾಷಿಯರ್​ ಸಚಿನ್ ಮರ್ಡರ್​ ಕೇಸ್ ಸಂಬಂಧ ಅರೆಸ್ಟ್​ ಮಾಡಲಾಗಿದೆ.​ ಪಿಎಸ್‌ಐ ಎಸ್ ರಾಜು ರೆಡ್ಡಿ ಸ್ವಯಂ ರಕ್ಷಣೆ ಹಿನ್ನಲೆ ಆರೋಪಿ ಕಾಲಿಗೆ ಫೈರಿಂಗ್​ ಮಾಡಿದ್ದಾರೆ.

ಗಾಯಾಳು ಸತೀಶ್​ ನನ್ನು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಪೊಲೀಸ್‌ ಸಿಬ್ಬಂದಿ ಪ್ರವೀಣ್‌ ಮತ್ತು ಶಿವರಾಜ್​ಗೆ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

ಘಟನೆ ಹಿನ್ನಲೆ

ಮದ್ಯ ನೀಡಲು ನಿರಾಕರಿಸಿದ್ದಕ್ಕೆ ಬಾರ್​ ಕ್ಯಾಶಿಯರ್​ ಸಚಿನ್​ ನನ್ನು ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ನಿನ್ನೆ (ಜೂ.05) ಬಾರ್​ಗೆ ಗಾಂಜಾ ಅಮಲಿನಲ್ಲಿ ಬಂದ ಮೂವರು ಮದ್ಯ ಕೇಳಿದ್ದಾರೆ. ಅದಕ್ಕೆ ಕ್ಯಾಶಿಯರ್​ ಸಚಿನ್​​ ಸಮಯ ಮುಗಿದಿದೆ ಮದ್ಯ ನೀಡಲು ಆಗುವುದಿಲ್ಲ ಎಂದಿದ್ದಾನೆ. ಇದರಿಂದ ಸಿಟ್ಟಿಗೆದ್ದ ಮೂವರು ಗಲಾಟೆ ಮಾಡಿದ್ದಾರೆ.

ನಂತರ ಡ್ರ್ಯಾಗರ್ ನಿಂದ ದುಷ್ಕರ್ಮಿಗಳು ಕ್ಯಾಶಿಯರ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಅಲ್ಲದೇ ಆರೋಪಿಗಳು ಬಾರ್​ ಸನಿಹ ಗಸ್ತಿಗೆ ನೀಯೋಜಿಸಿದ್ದ ಪೊಲೀಸರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಗಂಭೀರಗೊಂಡಿದ್ದ ಕ್ಯಾಶಿಯರ್ ಸಚಿನ್​​ನನ್ನು ಸ್ಥಳೀಯರು ಕೂಡಲೇ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಕುಂಸಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಿದೆ.

Join Whatsapp