ಸರ್ಕಾರಿ ಆಟದ ಮೈದಾನ ಕಬಳಿಸಲು ಯತ್ನ; ಸ್ಥಳೀಯರಿಂದ ವ್ಯಾಪಕ ವಿರೋಧ

Prasthutha|

ಮಂಗಳೂರು: ಸರ್ಕಾರಿ ಜಾಗದಲ್ಲಿರುವ ಆಟದ ಮೈದಾನವನ್ನು ಕಬಳಿಸಲು ಯತ್ನಿಸಿದ  ಆರೋಪದಲ್ಲಿ  ಕಾರ್ಪೋರೇಟರ್ ಪತಿ ಮತ್ತು ಸ್ಥಳೀಯರ ಮಧ್ಯೆ ಪರಸ್ಪರ ವಾಗ್ವಾದವುಂಟಾದ ಘಟನೆ ನಗರದ  ಹೊರವಲಯದ ಪಚ್ಚನಾಡಿಯ ಕಾರ್ಮಿಕ ನಗರದಲ್ಲಿ  ನಡೆದಿದೆ.

- Advertisement -

ಆಟದ ಮೈದಾನವಾಗಿ ಬದಲಾಗಿರುವ ಎರಡು ಎಕರೆ ಸರ್ಕಾರಿ ಜಾಗದಲ್ಲಿ ಪಚ್ಚನಾಡಿ ಕಾರ್ಪೊರೇಟರ್ ಸಂಗೀತ ನಾಯಕ್ ಅವರ ಪತಿ ಏಕಾಏಕಿ ಅಕ್ರಮ ಮನೆ ನಿರ್ಮಾಣಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಕಾಮಗಾರಿಗೆ ತಡೆಯೊಡ್ಡಿದ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿದ ಬಳಿಕ ಸ್ಥಳೀಯರೊಂದಿಗೆ ಮಾತನಾಡಿದ ಕಾರ್ಪೊರೇಟರ್ ಸಂಗೀತ, ಮನೆ ನಿರ್ಮಾಣದ ವಿಷಯ ಗಮನಕ್ಕೆ ಬಂದಿರಲಿಲ್ಲ. ಇಲ್ಲಿ ಯಾವುದೇ ಮನೆ ನಿರ್ಮಾಣವಾಗದಂತೆ ನೋಡಿಕೊಳ್ಳಲಾಗುವುದು. ಇದು ಆಟದ ಮೈದಾನವಾಗಿಯೇ ಉಳಿಯಲಿದೆ ಎಂದು ಭರವಸೆ ನೀಡಿದ್ದಾರೆ.

Join Whatsapp