ಪ್ರಶಸ್ತಿಗೆ ತಡೆ | SDPI ಮಾತು ಕೇಳಿ ರಾಜ್ಯ ಸರ್ಕಾರ ನಡೆಯುತ್ತದೆಯೇ?: ಛಲವಾದಿ ನಾರಾಯಣಸ್ವಾಮಿ

Prasthutha|

ಬೆಂಗಳೂರು: ಉತ್ತಮ ಶಿಕ್ಷಕರ ಆಯ್ಕೆ ವಿಚಾರದಲ್ಲಿ ಸರ್ಕಾರಕ್ಕೆ ದೂರು ಕೊಟ್ಟಿದ್ದು ಯಾರು? ಎಸ್ ಡಿಪಿಐನವರು ದೂರು ಕೊಟ್ಟಿದ್ದಾರೆ. ಎಸ್ ಡಿಪಿಐ ಮಾತು ಕೇಳಿ ಈ ಸರ್ಕಾರ ನಡೆಯುತ್ತಿದೆಯಾ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

- Advertisement -


ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಯಾರನ್ನೋ ಓಲೈಕೆ ಮಾಡುವ ಕಾರಣಕ್ಕೆ ಇವತ್ತು ಕುಂದಾಪುರ ಸರ್ಕಾರಿ ಕಾಲೇಜು ಪ್ರಾಂಶುಪಾಲ ರಾಮಕೃಷ್ಣರಿಗೆ ನೀಡಿದ್ದ ಉತ್ತಮ ಪ್ರಶಸ್ತಿ ತಡೆಹಿಡಿಯುವ ಕ್ರಮ ಕೈಗೊಂಡಿದ್ದು ಸರಿಯಲ್ಲ. ಶಾಲೆಗಳು ಪವಿತ್ರ ಸ್ಥಳಗಳು. ಮಕ್ಕಳ ಮನಸ್ಸಿನಲ್ಲಿ ಇಂಥ ಕುಚೋದ್ಯತನ ಹುಟ್ಟುಹಾಕುವ ಕೆಲಸ ಮಾಡಬಾರದು ಎಂದು ತಿಳಿಸಿದರು.


ಹನುಮಾನ್ ವಿಚಾರದಲ್ಲೂ ಎಸ್ ಡಿಪಿಐ ದೂರು ನೀಡಿತ್ತು. ನೀವು ಆದೇಶ ಮಾಡಿಬಿಟ್ಟಿರಿ. ಆದೇಶ ಮಾಡಲು ನಿಮಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಕೇಳಿದರು.



Join Whatsapp
Exit mobile version