ವಿಶ್ವ ಜಲದಿನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಮಂಗಳೂರು ವತಿಯಿಂದ ಪಣಂಬೂರು ಬೀಚ್‌ನಲ್ಲಿ ಜಾಗೃತಿ ಹಾಗೂ ಸ್ವಚ್ಛತಾ ಕಾರ್ಯಕ್ರಮ

Prasthutha|

ಮಂಗಳೂರು : ವಿಶ್ವ ಜಲ ದಿನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಪಣಂಬೂರು ಬೀಚ್‌ನಲ್ಲಿ ನೀರಿನ ಮಹತ್ವದ ಕುರಿತಾದ ಜಾಗೃತಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

- Advertisement -

    ಬೀಚ್‌ಗಳಲ್ಲಿ ತ್ಯಾಜ್ಯಗಳನ್ನು ಎಸೆದು, ಕಸ ಕಡ್ಡಿಗಳಿಂದ ಸಮುದ್ರದ ದಡ ಮಲಿನವಾಗುತ್ತಿದೆ, ಇದರ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬೀಚ್‌ ಬಳಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ಗ್ರಾಮಾಂತರ ಅಧ್ಯಕ್ಷರಾದ ಶರಫುದ್ದೀನ್, ಕಾರ್ಯದರ್ಶಿ ಅಶ್ರಫ್ ಪೊರ್ಕೊಡಿ, ಸಮಿತಿ ಸದಸ್ಯರಾದ ನಬೀಲ್ , ಝಾಹಿರ್ ಮತ್ತಿತ್ತರು ಉಪಸ್ಥಿತರಿದ್ದರು.

Join Whatsapp