ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಟ್ಟ ಉತ್ತರ ಪ್ರದೇಶದ ಯೋಗಿ ಸರಕಾರ

Prasthutha|

ಲಖನೌ : ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ವಿಮಾನ ನಿಲ್ದಾಣಕ್ಕೆ ‘ಮರ್ಯಾದಾ ಪುರುಷೋತ್ತಮ ಶ್ರೀರಾಮ್ ವಿಮಾನ ನಿಲ್ದಾಣ’ ಎಂದು ಹೆಸರಿಡಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಚಿವ ಸಂಪುಟ ನಿರ್ಧರಿಸಿದೆ.

- Advertisement -

ಯೋಗಿ ಸಚಿವ ಸಂಪುಟ ವಿಮಾನ ನಿಲ್ದಾಣದ ಹೆಸರನ್ನು ಅಂತಿಮಗೊಳಿಸಿ, ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪ್ರಸ್ತಾಪ ಸಲ್ಲಿಸಲು ನಿರ್ಧರಿಸಲಾಗಿದೆ.  ಅಯೋಧ್ಯೆಯನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಲು ಉತ್ತರ ಪ್ರದೇಶ ಸರಕಾರ ಯೋಜನೆ ಸಿದ್ಧಪಡಿಸಿದೆ ಮತ್ತು ಪ್ರಚಾರ ಮಾಡುತ್ತಿದೆ.

Join Whatsapp