ಬಿ.ಸಿ.ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ: ಅಸಹಜ ಸಾವು ಎಂದು ಸಹೋದರನಿಂದ ದೂರು

Prasthutha|

ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಮಗಳ ಗಂಡ ಪ್ರತಾಪ್ ಕುಮಾರ್ ನಿಗೂಢವಾಗಿ ಸಾವನ್ನಪ್ಪಿದ್ದು, ಕಾರಿನಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತ ಪ್ರತಾಪ ಕುಮಾರ್ ಸಹೋದರ ಪ್ರಭುದೇವ ಅವರು ಈ ಪ್ರಕರಣ ಸಂಬಂಧ ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

ಇದೊಂದು ಅಸಹಜ ಸಾವು ಎಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ಠಾಣೆಗೆ ಪ್ರಭುದೇವ ಅವರು ದೂರು ಸಲ್ಲಿಸಿದ್ದಾರೆ. ಮದುವೆ ಆಗಿ 16 ವರ್ಷವಾಗಿತ್ತು, ಮಕ್ಕಳಾಗಿರಲಿಲ್ಲ ಎಂದು ಪ್ರತಾಪ್ ತೀವ್ರ ಬೇಸರದಲ್ಲಿದ್ದ. ಮಂಕಾಗಿ ತೀವ್ರ ಕಿನ್ನತೆಗೆ ಒಳಗಾಗಿದ್ದ ಎಂದು ಮೃತ ಪ್ರತಾಪ ಕುಮಾರ್ ಸಹೋದರ ಪ್ರಭುದೇವ ಅವರು ದೂರು ದಾಖಲಿಸಿದ್ದಾರೆ.



Join Whatsapp