ಚಿರತೆ ದಾಳಿಗೆ ಬಿ.ಕಾಂ ವಿದ್ಯಾರ್ಥಿ ಬಲಿ

Prasthutha|

ಮೈಸೂರು: ಸ್ನೇಹಿತರೊಂದಿಗೆ ದೇವಾಲಯಕ್ಕೆ ಪೂಜೆಗೆಂದು ಹೋಗಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ ಘಟನೆ ತಿ.ನರಸೀಪುರ ತಾಲೂಕಿನ ಮದ್ಗಾರ್ ಲಿಂಗಯ್ಯನಹುಂಡಿ ಗ್ರಾಮದ ಮಲ್ಲಪ್ಪನ ಬೆಟ್ಟದಲ್ಲಿ ನಡೆದಿದೆ.

- Advertisement -


ಮಹಾರಾಜ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಯಾಗಿರುವ ಮಂಜುನಾಥ್ (18) ಮೃತಪಟ್ಟ ಯುವಕ.


ಮಲ್ಲಪ್ಪನ ಬೆಟ್ಟದ ಸಮೀಪವಿರುವ ಮುದ್ದು ಮಾರಮ್ಮ ದೇವಾಲಯಕ್ಕೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಪೊದೆಯಿಂದ ಜಿಗಿದು ಬಂದ ಚಿರತೆ ಯುವಕನ ಮೇಲೆ ಏಕಾಏಕಿ ದಾಳಿ ನಡೆಸಿದೆ. ಸ್ನೇಹಿತರು ಚಿರತೆಗೆ ಕಲ್ಲು ಹೊಡೆದು ಮಂಜುನಾಥ್‌ನನ್ನು ರಕ್ಷಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಗ್ರಾಮಸ್ಥರು ಸಹಾಯಕ್ಕೆ ಬರುವಷ್ಟರಲ್ಲಿ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು.

- Advertisement -


ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಶಶಿಧರ್ ಹಾಗೂ ಬನ್ನೂರು ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ಎಂ. ಅಶ್ವಿನ್ ಕುಮಾರ್ ಮೃತನ ಮನೆಗೆ ಭೇಟಿ ನೀಡಿ ಸರ್ಕಾರದಿಂದ ಸಿಗಬಹುದಾದ ಪರಿಹಾರವನ್ನು ದೊರಕಿಸುವ ಭರವಸೆ ನೀಡಿದ್ದಾರೆ.

Join Whatsapp