ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಬಿ.ಎಲ್. ಶಂಕರ್ ರಾಜೀನಾಮೆ

Prasthutha|

ಬೆಂಗಳೂರು: ನಾಡಿನ ಹೆಸರಾಂತ ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಬಿ.ಎಲ್. ಶಂಕರ್  ರಾಜೀನಾಮೆ ಸಲ್ಲಿಸಿದ್ದಾರೆ.

- Advertisement -

ಬಿ.ಎಲ್. ಶಂಕರ್ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ,  ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಈ ಮೂಲಕ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಇಲ್ಲಿಯವರೆಗೆ ತಾವು ಹಾಗೂ ಪ್ರತಿಷ್ಠಾನದ ಇತರ ಸದಸ್ಯರು ಹಾಗೂ ಸಿಬ್ಬಂದಿವರ್ಗದವರು ನೀಡಿರುವ ಸಕಾಲಿಕ ಸಹಕಾರಕ್ಕೆ ಆಭಾರಿಯಾಗಿದ್ದೇನೆ. ಸದರಿ ರಾಜೀನಾಮೆಯನ್ನು ಅಂಗೀಕರಿಸಿ ದೃಢೀಕರಿಸಬೇಕಾಗಿ ಕೋರುತ್ತೇನೆ ಎಂದು ತಿಳಿಸಲಾಗಿದೆ.

ಬಿ.ಎಲ್. ಶಂಕರ್ ಅವರು 2022ರ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ನಾಲ್ಕನೆ ಬಾರಿಗೆ ಚುನಾಯಿತರಾಗಿದ್ದು,  ಮುಂದಿನ ಮೂರು ವರ್ಷದವರೆಗೆ ಆಡಳಿತ ನಡೆಸಲಿದ್ದಾರೆ.

Join Whatsapp