Home ಟಾಪ್ ಸುದ್ದಿಗಳು ಬಾಬರಿ ಮಸೀದಿ ಧ್ವಂಸ ಪ್ರಕರಣ; ಅರ್ಜಿಯ ಅರ್ಹತೆ ಕುರಿತ ತೀರ್ಪು ಕಾಯ್ದಿರಿಸಿದ ಅಲಹಾಬಾದ್‌ ಹೈಕೋರ್ಟ್

ಬಾಬರಿ ಮಸೀದಿ ಧ್ವಂಸ ಪ್ರಕರಣ; ಅರ್ಜಿಯ ಅರ್ಹತೆ ಕುರಿತ ತೀರ್ಪು ಕಾಯ್ದಿರಿಸಿದ ಅಲಹಾಬಾದ್‌ ಹೈಕೋರ್ಟ್

ಲಕ್ನೋ: ಬಾಬರಿ ಮಸೀದಿ ಧ್ವಂಸ ಪ್ರಕರಣದ  32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಲಕ್ನೋ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದ ಅರ್ಜಿಯ ಅರ್ಹತೆ ಕುರಿತ ತೀರ್ಪನ್ನು  ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠ  ಕಾಯ್ದಿರಿಸಿದೆ.

ಬಿಜೆಪಿಯ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ  ಸಹಿತ 32 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿತ್ತು.

ಅಯೋಧ್ಯೆ ನಿವಾಸಿಗಳಾದ ಹಾಜಿ ಮೆಹಬೂಬ್‌ ಮತ್ತು ಹಾಜಿ ಅಖ್ಲಾಕ್‌ ಅವರು ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಲಕ್ನೋ ಹೈಕೋರ್ಟ್ ಗೆ ಸಲ್ಲಿಸಿದ್ದರು. 

ನ್ಯಾಯಮೂರ್ತಿಗಳಾದ ರಮೇಶ್‌ ಸಿನ್ಹಾ ಮತ್ತು ಸರೋಜ್‌ ಯಾದವ್‌ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಅರ್ಜಿಯ ಅರ್ಹತೆಯನ್ನು ಪರಿಶೀಲಿಸಿ ತೀರ್ಪು ಕಾಯ್ದಿರಿಸಿದೆ.

ವಿಶೇಷ ನ್ಯಾಯಾಲಯದ ತೀರ್ಪನ್ನು ಸಿಬಿಐ ಪ್ರಶ್ನಿಸದ ಕಾರಣ  ನಾವು ಹೈಕೋರ್ಟ್‌ನಲ್ಲಿ ಈ ತೀರ್ಪನ್ನು ಪ್ರಶ್ನಿಸಿದ್ದೇವೆ ಎಂದು   ಅರ್ಜಿದಾರರು ನ್ಯಾಯಪೀಠದ ಮುಂದೆ ಹೇಳಿದ್ದಾರೆ.

Join Whatsapp
Exit mobile version