ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ

Prasthutha|

ಕಲಬುರಗಿ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರ ಕಾರು ಶುಕ್ರವಾರ ರಾತ್ರಿ 12:30 ರ ಸುಮಾರಿಗೆ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ಅಪಘಾತವಾಗಿದೆ.

- Advertisement -

ಅಪಘಾತದಲ್ಲಿ ಚಿಂಚನಸೂರ್ ಕಾಲು ಮತ್ತು ಮುಖಕ್ಕೆ ಗಾಯಗಳಾಗಿದ್ದು, ಅವರನ್ನು ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿದ್ದೆಯ ಮಂಪರಿನಲ್ಲಿದ್ದ ವಾಹನ ಚಾಲಕನಿಗೆ ರಸ್ತೆಯ ಮಧ್ಯೆ ಇರುವ ಗುಂಡಿ ಕಾಣದೆ ಕಾರು ಗುಂಡಿಯಲ್ಲಿ ಸಿಲುಕಿ ಸ್ಕಿಡ್​ ಆಗಿದೆ. ಇದರಿಂದ ವಾಹನ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಮತ್ತು ಗನ್​ಮ್ಯಾನ್​ಗೆ ಯಾವುದೇ ಗಾಯಗಳಾಗಿಲ್ಲ.

- Advertisement -

ಬಾಬುರಾವ್ ಚಿಂಚನಸೂರ್ ಗುರುಮಿಟಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

Join Whatsapp