ಬಿಜೆಪಿ ನಾಯಕಿ ಸೋನಾಲಿ ಸಾವಿನ ಹಿನ್ನೆಲೆ: ಕರ್ಲೀಸ್ ರೆಸ್ಟೋರೆಂಟ್ ಧ್ವಂಸಕ್ಕೆ ಸುಪ್ರೀಮ್ ಕೋರ್ಟ್ ತಡೆ

Prasthutha|

ಪಣಜಿ: ಇತ್ತೀಚೆಗೆ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರು ಗೋವಾದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಕರಾವಳಿ ನಿಯಂತ್ರಣ ವಲಯದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶದನ್ವಯ ಗೋವಾದ ಕರ್ಲೀಸ್ ರೆಸ್ಟೋರೆಂಟ್ ಅನ್ನು ಕೆಡವದಂತೆ ಸುಪ್ರೀಮ್ ಕೋರ್ಟ್ ತಡೆಯಾಜ್ಞೆ ನೀಡಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ನೇತೃತ್ವದ ತ್ರಿಸದಸ್ಯ ಪೀಠವು, ಈ ಕಟ್ಟಡವನ್ನು ಉರುಳಿಸುವ ಆದೇಶವನ್ನು ತಡೆಹಿಡಿದಿದ್ದು, ಸೆಪ್ಟೆಂಬರ್ 16 ರಂದು ಈ ಅರ್ಜಿಯನ್ನು ಪರಿಗಣಿಸಲು ನಿರ್ಧರಿಸಿದೆ.

ಇದಕ್ಕೆ ಸಂಬಂಧಿಸಿದ ಫೋಟೋ ಮತ್ತು ವರದಿಗಳನ್ನು ಮುಂದಿನ ಬುಧವಾರದೊಳಗೆ ಸಮರ್ಪಿಸುವಂತೆ ಸುಪ್ರೀಮ್ ಕೋರ್ಟ್ ಪೀಠ, ಗೋವಾದ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಿದೆ.

- Advertisement -

ಹಸಿರು ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲಿ ಗೋವಾ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರವು ಈ ರೆಸ್ಟೋರೆಂಟ್ ಅನ್ನು ನೆಲಸಮಗೊಳಿಸುತ್ತಿದೆ.

ಖ್ಯಾತ ಟಿಕ್ ಟಾಕ್ ತಾರೆ, ಹರ್ಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಸಾವಿನ ಬಳಿಕ ಕರ್ಲೀಸ್ ರೆಸ್ಟೋರೆಂಟ್ ಹೆಸರು ಚರ್ಚೆಗೆ ಗ್ರಾಸವಾಗಿದೆ.



Join Whatsapp