ಹಿಂದುಗಳ ಪುಣ್ಯ ಕ್ಷೇತ್ರಗಳೆಂದು ಪರಿಗಣಿಸಲಾದ ಬದ್ರಿನಾಥ ಕ್ಷೇತ್ರದಲ್ಲಿಯೂ ಬಿಜೆಪಿಗೆ ಸೋಲು

Prasthutha|

ಬದ್ರಿನಾಥ: ಅಯೋಧ್ಯೆ ಬಳಿಕ ಹಿಂದುಗಳ ಪುಣ್ಯ ಕ್ಷೇತ್ರಗಳೆಂದು ಪರಿಗಣಿಸಲಾದ ಉತ್ತರಾಖಂಡದ ಬದ್ರಿನಾಥ ಕ್ಷೇತ್ರದಲ್ಲಿಯೂ ಕಾಂಗ್ರೆಸ್‌ ಗೆಲುವನ್ನು ಕಂಡಿದೆ. ಬದ್ರಿನಾಥದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿ ಲಖಪತ್ ಸಿಂಗ್ ಬುಟೋಲಾ ಅವರು 3.5 ಸಾವಿರ ಮತಗಳಿಂದ ಗೆದ್ದಿದ್ದಾರೆ.

- Advertisement -

ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಮುನ್ನಡೆಯಲಿದ್ದು, ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ. ಪಂಜಾಬ್‌ನ ಜಲಂಧರ್‌ನಲ್ಲಿ ಎಎಪಿ ಗೆದ್ದಿದ್ದು, ಹಿಮಾಚಲ ಪ್ರದೇಶದ ಡೆಹ್ರಾ ಕ್ಷೇತ್ರದಲ್ಲಿ ಅಲ್ಲಿನ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಸುಖವಿಂದರ್ ಸಿಂಗ್ ಸುಖು ಪತ್ನಿ ಕಮಲೇಶ್ ಠಾಕೂರ್ ಹಾಗೂ ಉತ್ತರಾಖಂಡದ ಬದ್ರಿನಾಥ್ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕಾಂಗ್ರೆಸ್‌ ಅಭ್ಯರ್ಥಿ ಲಖಪತ್ ಸಿಂಗ್ ಗೆಲುವು ಸಾಧಿಸಿದ್ದಾರೆ.



Join Whatsapp