ಬಾಗಲಕೋಟೆಯಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ| ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ

Prasthutha|

ಬಾಗಲಕೋಟೆ: ಇತ್ತೀಚೆಗಷ್ಟೇ ತಾಯಿಯೊಬ್ಬರು ತನ್ನ ಇಬ್ಬರು ಪುತ್ರಿಯರ ಜತೆ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಹನುಮಾಪುರದಲ್ಲಿ ನಡೆದಿತ್ತು.  ಬಾಲಕೋಟೆ ಜಿಲ್ಲೆ ತಿಮ್ಮಪೂರ ಗ್ರಾಮದಲ್ಲಿ ಕಳೆದ ವಾರ ಅಷ್ಟೇ ತಾಯಿಯೊಬ್ಬರು ತನ್ನ ಮೂವರು ಪುತ್ರಿಯರೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಇನ್ನೊಂದು ಘಟನೆ ವರದಿಯಾಗಿತ್ತು.

- Advertisement -

ಅಲ್ಲದೇ ಹಾಸನದಲ್ಲೂ ಸಹ ತಾಯಿ ತನ್ನ ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಪ್ರಕರಣಗಳು ಮಾಸುವ ಮುನ್ನವೇ ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ  ಪ್ರಕರಣ ವರದಿಯಾಗಿದೆ.

- Advertisement -

ತಾಯಿಯೊಬ್ಬರು ತನ್ನ ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಗ್ರಾಮ ಬಳಿಯ ಘಟಪ್ರಭಾ ನದಿಗೆ ಹಾರಿ ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

 ಸೂಳಿಬಾವಿ ನಿವಾಸಿಗಳಾದ ಉಮಾ ಮಾಸರೆಡ್ಡಿ(45) ಹಾಗೂ ಪುತ್ರಿಯರಾದ ಐಶ್ವರ್ಯ(20), ಸೌಂದರ್ಯ(18) ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಕಮತಗಿ ಬಳಿ ಸೇತುವೆಯಿಂದ ನದಿಗೆ ಹಾರಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಮಲಪ್ರಭಾ ನದಿಯಿಂದ ಮೃತದೇಹಗಳನ್ನು ಮೇಲೆತ್ತಿದ್ದಾರೆ. ಈ ಬಗ್ಗೆ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp