ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್ ನಿಧನ

Prasthutha|

- Advertisement -

ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತ ಆಧುನಿಕ ಸೂಫಿಸಂತ ಇಬ್ರಾಹಿಂ ಸುತಾರ್ ಇಂದು ಬೆಳಿಗ್ಗೆ 6.30ಕ್ಕೆ ಬಾಗಲಕೋಟೆ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಬ್ರಾಹಿಂ ಸುತಾರ್ ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೂರ್ತಿಯಾಗಿದ್ದರು. ಪ್ರವಚನಕ್ಕೆ ಹೆಸರಾಗಿದ್ದರು. ಅಲ್ಲದೇ ಬಣವಣ್ಣನವರ ಅನುಯಾಯಿಗಳಾಗಿದ್ದು, ಬಸವಣ್ಣನವರ ವಚನಗಳನ್ನು ಹೇಳುತ್ತಿದ್ದರು.

Join Whatsapp