ಜೆಎನ್ ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಗೆ ಮತ್ತೊಮ್ಮೆ ಜಾಮೀನು ನಿರಾಕರಣೆ

Prasthutha|

ಹೊಸದಿಲ್ಲಿ: ಜೆಎನ್ ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರಿಗೆ ನ್ಯಾಯಾಲಯ ಮತ್ತೊಮ್ಮೆ ಜಾಮೀನು ನಿರಾಕರಿಸಿದೆ.

- Advertisement -


ದಿಲ್ಲಿ ಗಲಭೆ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದಲ್ಲಿ ಜೆಎನ್ ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರನ್ನು ದೆಹಲಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಫೆಬ್ರವರಿ 2020 ರಲ್ಲಿ ನಡೆದಿದ್ದ ದಿಲ್ಲಿ ಗಲಭೆಗೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ-ಯುಎಪಿಎ ಯಡಿ ಖಾಲಿದ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.


ಮಾರ್ಚ್ 21 ರಂದು ನ್ಯಾಯಾಲಯವು ಖಾಲಿದ್ ಅವರ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್ 23 ಕ್ಕೆ ಮುಂದೂಡಿತ್ತು. ನಿನ್ನೆ, ಅವರ ಜಾಮೀನು ಅರ್ಜಿಯ ತೀರ್ಪನ್ನು ಮಾರ್ಚ್ 24 ಕ್ಕೆ ಮುಂದೂಡಲಾಯಿತು, ಅಂದರೆ ಇಂದು ಮತ್ತೆ ಆದೇಶವು ತಿದ್ದುಪಡಿ ಹಂತದಲ್ಲಿದೆ ಎಂದು ನ್ಯಾಯಾಧೀಶರು ಹೇಳಿದ್ದರು. ಇದೀಗ ಅವರಿಗೆ ಜಾಮೀನು ನಿರಾಕರಿಸಲಾಗಿದೆ.

Join Whatsapp