ನಟ ಚೇತನ್ ಅಹಿಂಸಾಗೆ ಜಾಮೀನು ನೀಡಿದ ನ್ಯಾಯಾಲಯ

Prasthutha|

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆ ಎಂಬ ಆರೋಪದಲ್ಲಿ ಬಂಧಿತನಾಗಿದ್ದ ನಟ, ಸಂವಿಧಾನ ಪರ ಹೋರಾಟಗಾರ ನಟ ಚೇತನ್ ಅಹಿಂಸಾ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

- Advertisement -

ನಟ ಚೇತನ್ ಅವರನ್ನು ಶೇಷಾದ್ರಿಪುರಂ ಠಾಣಾ ಪೊಲೀಸರು ಮಂಗಳವಾರ ಬಂಧಿಸಿದ್ದರು. ತಡ ರಾತ್ರಿ ಚೇತನ್ ಅವರನ್ನು ವೈಯಾಲಿಕಾವನ್ ಪೊಲೀಸ್ ಠಾಣೆಯಿಂದ ಶೇಷಾದ್ರಿಪುರಂ ಪೊಲೀಸರು ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ನಲ್ಲಿರುವ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ನಂತರ 8ನೇ ಎಸಿಎಂಎಂ ಕೋರ್ಟ್ ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು.

Join Whatsapp