ಅವಹೇಳನ ಆರೋಪ: ಸುನೀಲ್ ಬಜಿಲಕೇರಿಗೆ ಜಾಮೀನು

Prasthutha|

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆರೋಪದಡಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯನ್ನು ತಡ ರಾತ್ರಿ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

- Advertisement -


ಶುಕ್ರವಾರ ರಾತ್ರಿ ಬಜಪೆ ಠಾಣೆ ಪೊಲೀಸರು ಸುನೀಲ್ ಬಜಿಲಕೇರಿಯನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗೆ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಆದರೆ ನ್ಯಾಯಾಲಯವು ಸುನಿಲ್ ಬಜಿಲಕೇರಿಗೆ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.

Join Whatsapp