ಬಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಮಾರಣಾಂತಿಕ ಹಲ್ಲೆ: ಇಂದು ಬಂದ್ ಗೆ ಕರೆ

Prasthutha|

ತುಮಕೂರು : ಬಜರಂಗದಳ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಹಾಗೂ ಕಾರ್ಯಕರ್ತ ಕಿರಣ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತುಮಕೂರಿನ ಗುಬ್ಬಿ ಗೇಟ್ ಬಳಿ ನಡೆದಿದೆ.

- Advertisement -

ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ಗುಂಪೊಂದು ಮಾರಕಾಸ್ತ್ರಗಳಿಂದ ಮಂಜು ಭಾರ್ಗವ್ ಹಾಗೂ ಕಿರಣ್ ಮೇಲೆ ಹಲ್ಲೆ ನಡೆಸಿದೆ. ಮಂಜು ಭಾರ್ಗವ್ ಕಳೆದ ಮೂರು ತಿಂಗಳಿನಿಂದ ಅಕ್ರಮ ಗೋಸಾಗಾಟದ ವಿರುದ್ಧ ಹೋರಾಟ ನಡೆಸುತ್ತಿದ್ದರು ಎನ್ನಲಾಗಿದ್ದು, ಲಾರಿಗಳಲ್ಲಿ ಸಾಗಿಸುತ್ತಿದ್ದ ನೂರಾರು ಗೋವುಗಳನ್ನು ಪೊಲೀಸರ ಸಹಕಾರದಿಂದ ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರ ಮೇಲೆ ಹಲ್ಲೆ ಮಾಡುವ ಬೆದರಿಕೆಯನ್ನು ಹಾಕಲಾಗಿತ್ತು ಎನ್ನಲಾಗಿದೆ. ಇದರ ಬೆನ್ನಲ್ಲೇ ಇಂದು ಮಾರಣಾಂತಿಕ ಹಲ್ಲೆ ನಡೆದಿದೆ.

ಘಟನೆ ಬೆನ್ನಲ್ಲೇ ಶಾಸಕ ಜಿ.ಬಿ ಜ್ಯೋತಿ ಗಣೇಶ್ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಿದ್ದಾರೆ. ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳು ಬುಧವಾರ ಸ್ವಯಂ ಪ್ರೇರಿತ ತುಮಕೂರು ಬಂದ್ ಗೆ ಕರೆ ನೀಡಿವೆ.

Join Whatsapp