Home ಟಾಪ್ ಸುದ್ದಿಗಳು ಆರ್ ಅಶೋಕ್‌ಗೆ ‘ನಾಲಗೆಯನ್ನು ಎಕ್ಕಡ ರೀತಿ ಬಳಸಿಕೊಳ್ಳಬೇಡಿ’ ಎಂದ ಭಜರಂಗದಳ

ಆರ್ ಅಶೋಕ್‌ಗೆ ‘ನಾಲಗೆಯನ್ನು ಎಕ್ಕಡ ರೀತಿ ಬಳಸಿಕೊಳ್ಳಬೇಡಿ’ ಎಂದ ಭಜರಂಗದಳ

ಮಂಗಳೂರು: ಪ್ರತಿಪಕ್ಷ ನಾಯಕ ಆರ್.ಅಶೋಕ್‌ಗೆ, ನಿಮ್ಮ ನಾಲಗೆಯನ್ನು ಎಕ್ಕಡ ರೀತಿ ಬಳಸಿಕೊಳ್ಳಬೇಡಿ, ಮಂಗಳೂರಿಗೆ ಬಂದಾಗ ಬಿಸಿ ತೋರಿಸುತ್ತೇವೆ ಎಂದು ಭಜರಂಗದಳದ ಕಾರ್ಯಕರ್ತನೋರ್ವ ಹೇಳಿದ್ದು ಬಿಜೆಪಿಗೆ ಇರಿಸುಮುರಿಸು ಆದಂತಾಗಿದೆ.

ವಿಧಾನಮಂಡಲ ಅಧಿವೇಶನಲ್ಲಿ ಅಶೋಕ್, ನಾನು ಗೃಹ ಸಚಿವನಾಗಿದ್ದಾಗ ಮಂಗಳೂರಿನ ಘಟನೆಯ ಸಂದರ್ಭದಲ್ಲಿ ಎಷ್ಟೇ ಒತ್ತಡವಿದ್ದರೂ ಮುಲಾಜಿಲ್ಲದೇ ಒದ್ದು ಒಳಗೆ ಹಾಕಿದ್ದೆ ಎಂದು ಹೇಳಿದ್ದರು. ಇದಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಭಜರಂಗದಳ ಸಹ ಸಂಯೋಜಕ ಪುನೀತ್ ಅತ್ತಾವರ ಎಂಬಾತ ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಭಜರಂಗದಳ ಸಹ ಸಂಯೋಜಕ, ನೀವು ಆರ್ ಅಶೋಕ್ ಅಲ್ಲ. ನಿಮ್ಮ ಹೆಸರನ್ನು ಎ. ಅಶೋಕ್ ಅಂತ ಬದಲಾಯಿಸಿ ಬಿಡಿ ಅಡ್ಜೆಸ್ಟ್‌ಮೆಂಟ್ ಅಶೋಕ್ ಅವರೇ.. ನಿಮ್ಮ ನಾಲಗೆಯನ್ನು ನಾಲಗೆ ರೀತಿಯನ್ನು ಬಳಸಿ ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜೆಸ್ಟ್‌ಮೆಂಟ್ ರಾಜಕಾರಣ ಎಂಬ ಗೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ. ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ. ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ. ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳಿ ಎಂದು ಪುನೀತ್ ಅತ್ತಾವರ ಆಗ್ರಹಿಸಿದ್ದಾರೆ.ಇನ್ನು ಪ್ರತಿಪ ಕ್ಷನಾಯಕನಾಗಿರುವ ನೀವು ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ. ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಒಂದಾ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ. ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ ಎಂದು ಹೇಳಿದ್ದಾನೆ.

Join Whatsapp
Exit mobile version