ಉತ್ತರ ಪ್ರದೇಶ । ಮುಸ್ಲಿಮ್ ಮಹಿಳೆಯರನ್ನು ಅತ್ಯಾಚಾರ ಎಸಗುವುದಾಗಿ ಬೆದರಿಕೆ ಹಾಕಿದ ಭಜರಂಗ ಮುನಿ ಬಂಧನ

Prasthutha|

ಲಕ್ನೋ: ಉತ್ತರ ಪ್ರದೇಶದ ಸೀತಾಪುರದಲ್ಲಿ ಸಂಘಪರಿವಾರ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಮ್ ಮಹಿಳೆಯರನ್ನು ಅಪಹರಿಸಿ ಅತ್ಯಾಚಾರವೆಸಗುವುದಾಗಿ ಬೆದರಿಕೆ ಹಾಕಿದ್ದ ಭಜರಂಗ ಮುನಿ ದಾಸ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಏಪ್ರಿಲ್ 2 ರಂದು ನಡೆದ ಮೆರವಣಿಗೆಯೊಂದರಲ್ಲಿ ಆರೋಪಿ ಭಜರಂಗ ಮುನಿ ಮುಸ್ಲಿಮರ ವಿರುದ್ಧ ಮಾಡಿದ ದ್ವೇಷಪೂರಿತ ಭಾಷಣದ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಭಜರಂಗ ಮುನಿಯ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ, ಪ್ರತಿಭಟನೆ ಭುಗಿಲೆದ್ದಿದ್ದು, ರಾಷ್ಟೀಯ ಮಹಿಳಾ ಆಯೋಗದ ಕೆಂಗಣ್ಣಿಗೆ ಕೂಡ ಗುರಿಯಾಗಿತ್ತು. ಮಾತ್ರವಲ್ಲ ಈತನ ಬಂಧನಕ್ಕೆ ಒತ್ತಡ ಹೇರಲಾಗಿತ್ತು.

- Advertisement -

ಸದ್ಯ ಭಜರಂಗ ಮುನಿ ವಿರುದ್ಧ ವಿವಿಧ ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸೀತಾಪುರ ಪೊಲೀಸರು ಬಂಧಿಸಿದ್ದಾರೆ.

Join Whatsapp