ಬಳ್ಳಾರಿ: ಕಾರ್ಖಾನೆಯಲ್ಲಿ ನೀರಿನ ಟ್ಯಾಂಕ್ ಗೆ ಬಿದ್ದು ಮೂವರು ಕಾರ್ಮಿಕರು ಮೃತ್ಯು

Prasthutha|

ಬಳ್ಳಾರಿ: ಸಂಡೂರು ತಾಲೂಕಿನ ತೋರಣಗಲ್ಲು ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಬಿದ್ದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

- Advertisement -


ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್ ಮೃತರು. ಪೈಪ್ ನಲ್ಲಿ ಬರುತ್ತಿದ್ದ ನೀರನ್ನು ನಿಲ್ಲಿಸದೆ ಹಾಗೆ ದುರಸ್ತಿ ಕಾರ್ಯ ಮಾಡುವಾಗ, ನೀರಿನ ರಭಸಕ್ಕೆ ಚನ್ನೈ ಮೂಲದ ಮಹಾದೇವನ್ ನೀರಿನ ಹೊಂಡದಲ್ಲಿ ಬಿದ್ದಿದ್ದಾನೆ.


ಈತನನ್ನು ರಕ್ಷಿಸಲು ಹೋಗಿ ಇನ್ನಿಬ್ಬರು ಇಳಿದು ಮೃತಪಟ್ಟಿದ್ದಾರೆ.

Join Whatsapp