ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

Prasthutha|

ಮಂಡ್ಯ: ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದ್ದು, ನದಿ ತಟದ ಪ್ರವಾಸಿ ತಾಣಗಳಿಗೂ ಮುಳುಗಡೆ ಆತಂಕ ಎದುರಾಗಿದೆ. ಪರಿಣಾಮವಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ವಿಶ್ವಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

- Advertisement -

ಕೆಆರ್ ಎಸ್ ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ರಂಗನತಿಟ್ಟಿನಲ್ಲಿ ಬೋಟಿಂಗ್ ಪಾಯಿಂಟ್ ಮುಳುಗಡೆಯಾಗಿದೆ. ಪಕ್ಷಿಗಳ ಆಶ್ರಯತಾಣ ನಡುಗಡ್ಡೆಗಳು ಕೂಡ ಭಾಗಶಃ ಜಲಾವೃತಗೊಂಡಿವೆ. ನೀರು ಮತ್ತಷ್ಟು ಹೆಚ್ಚಾದ್ರೆ ವಾಕಿಂಗ್ ಪಾಥ್ ಗೂ ನೀರು ನುಗ್ಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ರಂಗನತಿಟ್ಟು ಸಿಬ್ಬಂದಿ ಗೇಟ್ ಬಳಿಯೇ ಪ್ರವಾಸಿಗರನ್ನು ತಡೆದು ವಾಪಸ್ ಕಳುಹಿಸುತ್ತಿದ್ದಾರೆ.



Join Whatsapp