ಬೆಳಗಾವಿಯಲ್ಲಿ ಮಹಾಮೇಳವ್’ಗೆ ತಡೆ: ನಿಷೇಧಾಜ್ಞೆ ಜಾರಿ

Prasthutha|

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ಸಂದರ್ಭದಲ್ಲೇ ಮಹಾಮೇಳಾವ್ ನಡೆಸಲು ಎಂಇಎಸ್’ ನಡೆಸಿದ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

- Advertisement -

ಸೋಮವಾರ ಇಲ್ಲಿನ ವ್ಯಾಕ್ಸಿನ್ ಡಿಪೋದಲ್ಲಿ ಮಹಾಮೇಳವ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಇದಕ್ಕಾಗಿ ವೇದಿಕೆ ನಿರ್ಮಿಸಲಾಗುತ್ತಿತ್ತು. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ, ವೇದಿಕೆ ತೆರವುಗೊಳಿಸಿ ಕಾರ್ಯಕರ್ತರನ್ನು ಚದುರಿಸಿದರು.

 ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಹಾಮೇಳಾವ್’ಗೆ ತಡೆಯೊಡ್ದುತ್ತಿದ್ದಂತೆ ಮಹಾರಾಷ್ಟ್ರದಿಂದ ಸಾವಿರಾರು ಮಹಾ ವಿಕಾಸ ಅಗಾಡಿ ಕಾರ್ಯಕರ್ತರು ಕರ್ನಾಟಕದತ್ತ ಧಾವಿಸಿ ಬಂದಿದ್ದು, ಬೆಳಗಾವಿಯ ಗಡಿ ಭಾಗದಲ್ಲಿ ನುಗ್ಗಲು ಯತ್ನಿಸಿದ್ದರು. ನಿಪ್ಪಾಣಿ ತಾಲೂಕಿನ ಕೊಗನಳ್ಳಿ ಚೆಕ್ ಪೋಸ್ಟ್ ಬಳಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.

- Advertisement -

ಸ್ಥಳದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

Join Whatsapp