ಸಿಟಿ ರವಿಯ ಹುಟ್ಟೂರಿನ ಜಾತ್ರೆಯಲ್ಲಿ ಮುಸ್ಲಿಮರ ವ್ಯಾಪರಕ್ಕೆ ನಿಷೇಧ

Prasthutha|

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಸಿ.ಟಿ. ರವಿ ಹುಟ್ಟೂರಾದ ಚಿಕ್ಕಮಾಗರವಳ್ಳಿ ಗ್ರಾಮದ ಸುಗ್ಗಿ ಜಾತ್ರೆಗೂ ಮುಸ್ಲಿಮರ ವ್ಯಾಪಾರಕ್ಕೆ ನಿಷೇಧ ಹೇರಲಾಗಿದೆ. ಇಲ್ಲಿನ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ್ದೇವೆ ಎಂದು ಬ್ಯಾನರ್ ಅಳವಡಿಸಲಾಗಿದೆ. .

- Advertisement -

ಒಂದು ವಾರಗಳ ಕಾಲ ನಡೆಯಲರುವ ದೇವೀರಮ್ಮನ ಸುಗ್ಗಿ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ನಡೆಸಲು ಅವಕಾಶವಿಲ್ಲ ಎಂದು ಆರಂಭದಲ್ಲೇ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಬ್ಯಾನರ್ ಅಳವಡಿಸಿ, ನಿಷೇಧ ಹೇರಿದ್ದಾರೆ. ಈ ದೇಶದ ಕಾನೂನನ್ನು ಗೌರವಿಸದ, ನಾವು ಪೂಜಿಸುವ ಗೋವುಗಳನ್ನು ಕೊಲ್ಲುವ ಹಾಗೂ ದೇಶದ ಅಖಂಡತೆಗೆ ಸವಾಲು ಎಸೆಯುವ ಮುಸ್ಲಿಂ ಗೋಕಟುಕರ ಜೊತೆ ನಾವು ವ್ಯವಹರಿಸುವುದಿಲ್ಲ ಹಾಗೂ ಅವರು ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.

Join Whatsapp