Home ಟಾಪ್ ಸುದ್ದಿಗಳು ಸಿಟಿ ರವಿಯ ಹುಟ್ಟೂರಿನ ಜಾತ್ರೆಯಲ್ಲಿ ಮುಸ್ಲಿಮರ ವ್ಯಾಪರಕ್ಕೆ ನಿಷೇಧ

ಸಿಟಿ ರವಿಯ ಹುಟ್ಟೂರಿನ ಜಾತ್ರೆಯಲ್ಲಿ ಮುಸ್ಲಿಮರ ವ್ಯಾಪರಕ್ಕೆ ನಿಷೇಧ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಸಿ.ಟಿ. ರವಿ ಹುಟ್ಟೂರಾದ ಚಿಕ್ಕಮಾಗರವಳ್ಳಿ ಗ್ರಾಮದ ಸುಗ್ಗಿ ಜಾತ್ರೆಗೂ ಮುಸ್ಲಿಮರ ವ್ಯಾಪಾರಕ್ಕೆ ನಿಷೇಧ ಹೇರಲಾಗಿದೆ. ಇಲ್ಲಿನ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ್ದೇವೆ ಎಂದು ಬ್ಯಾನರ್ ಅಳವಡಿಸಲಾಗಿದೆ. .

ಒಂದು ವಾರಗಳ ಕಾಲ ನಡೆಯಲರುವ ದೇವೀರಮ್ಮನ ಸುಗ್ಗಿ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ನಡೆಸಲು ಅವಕಾಶವಿಲ್ಲ ಎಂದು ಆರಂಭದಲ್ಲೇ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಬ್ಯಾನರ್ ಅಳವಡಿಸಿ, ನಿಷೇಧ ಹೇರಿದ್ದಾರೆ. ಈ ದೇಶದ ಕಾನೂನನ್ನು ಗೌರವಿಸದ, ನಾವು ಪೂಜಿಸುವ ಗೋವುಗಳನ್ನು ಕೊಲ್ಲುವ ಹಾಗೂ ದೇಶದ ಅಖಂಡತೆಗೆ ಸವಾಲು ಎಸೆಯುವ ಮುಸ್ಲಿಂ ಗೋಕಟುಕರ ಜೊತೆ ನಾವು ವ್ಯವಹರಿಸುವುದಿಲ್ಲ ಹಾಗೂ ಅವರು ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.

Join Whatsapp
Exit mobile version