ರಾಜ್ಯಪಾಲ ಬಂಡಾರು ದತ್ತಾತ್ರೇಯ ಮೇಲೆ ಹಲ್ಲೆ ಆರೋಪ । ಐವರು ಕಾಂಗ್ರೆಸ್ ಶಾಸಕರು ಅಮಾನತು

Prasthutha|

ಶಿಮ್ಲಾ: ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರ ಮೇಲೆ ಕೆಲವು ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಐವರು ಕಾಂಗ್ರೆಸ್ ಶಾಸಕರನ್ನು ಅಮಾನತು ಮಾಡಲಾಗಿದೆ.

- Advertisement -

ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಭರದ್ವಾಜ್ ಅವರು ಮಂಡಿಸಿದ ನಿರ್ಣಯದ ಆಧಾರದಲ್ಲಿ, ಪ್ರತಿಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಸೇರಿದಂತೆ ಐವರು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸಲಾಗಿದೆ ಎಂದು ಸ್ಪೀಕರ್ ವಿಪಿನ್ ಪರ್ಮಾರ್ ಹೇಳಿದ್ದಾರೆ.

ಬಜೆಟ್ ಅಧಿವೇಶನದ ಆರಂಭಿಕ ದಿನದಂದು ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಬಳಿಕ ರಾಜ್ಯಪಾಲರು, ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮತ್ತು ಪರ್ಮಾರ್ ಅವರೊಂದಿಗೆ ತೆರಳುತ್ತಿದ್ದರು. ಈ ವೇಳೆ ಸ್ಪೀಕರ್ ಕೊಠಡಿಯ ಮುಂದೆ ರಾಜ್ಯಪಾಲರನ್ನು ಕಾಂಗ್ರೆಸ್ ಶಾಸಕರು ತಡೆಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ವಿಷಯ ಘೋಷಣೆಯ ಸಂದರ್ಭ ಅಮಾನತುಗೊಂಡ ಶಾಸಕರು ಯಾರೂ ಸದನದಲ್ಲಿರಲಿಲ್ಲ.

Join Whatsapp