Home ಟಾಪ್ ಸುದ್ದಿಗಳು ಭ್ರೂಣ ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಭ್ರೂಣ ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಬೆಂಗಳೂರು: ಬೆಂಗಳೂರು ಸೇರಿ 3 ಜಿಲ್ಲೆಗಳಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಈ ಸಂಬಂಧ ಮತ್ತೊಬ್ಬ ಆರೋಪಿಯನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಮಂಜುಳಾ ಅವರನ್ನು ಬಂಧಿಸಲಾಗಿದೆ.

ಪ್ರಕರಣದ ಮುಂದಿನ ತನಿಖಾ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇದುವರೆಗೆ ಪ್ರಕರಣದ ತನಿಖೆ ನಡೆಸಿದ್ದ ಬೈಯಪ್ಪನಹಳ್ಳಿ ಇನ್ಸ್ಪೆಕ್ಟರ್ ಎಂ ಪ್ರಶಾಂತ್ ಅವರು ಕೇಸನ್ನು ವರ್ಗಾಯಿಸಲಿದ್ದಾರೆ.

ಬೈಯಪ್ಪನಹಳ್ಳಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಪ್ರಕರಣ ಬಯಲಿಗೆ ತರಲಾಗಿತ್ತು. ಪ್ರಕರಣ ತನಿಖೆ ವೇಳೆ ದಾಖಲಾತಿಗಳ ಸಹಿತ 88 ದಿನಗಳಲ್ಲಿ 242 ಭ್ರೂಣ ಹತ್ಯೆ ಪತ್ತೆಯಾಗಿತ್ತು.

Join Whatsapp
Exit mobile version