Home ಟಾಪ್ ಸುದ್ದಿಗಳು ಬಿರಿಯಾನಿ ಆಸೆಗೆ‌ 2ಲಕ್ಷ ಕಳಕೊಂಡ ಬೆಂಗಳೂರಿನ ಆಟೋ ಚಾಲಕ

ಬಿರಿಯಾನಿ ಆಸೆಗೆ‌ 2ಲಕ್ಷ ಕಳಕೊಂಡ ಬೆಂಗಳೂರಿನ ಆಟೋ ಚಾಲಕ

ಬೆಂಗಳೂರು : ಆಟೋ ಚಾಲಕರೊಬ್ಬರು ಚಿನ್ನ ಅಡವಿಟ್ಟು 2 ಲಕ್ಷ ರೂ ಸಾಲ ಪಡೆದು ಬೈಕ್‍ನಲ್ಲಿಟ್ಟು ದಾರಿ ಮಧ್ಯೆ ಬಿರಿಯಾನಿ ತಿನ್ನಲು ಹೋಗಿ ವಾಪಸ್ ಬರುವಾಗ ಬೈಕ್‍ನಲ್ಲಿ ಇಟ್ಟಿದ್ದ ಹಣ ಕಳವಾಗಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ನಡೆದಿದೆ.


ಆಟೋ ಚಾಲಕ ಹನುಮಂತರಾಯ ಅವರು ಬ್ಯಾಂಕ್‍ನಲ್ಲಿ ಸಾಲ ಮಾಡಿ ಅದನ್ನು ಕಟ್ಟಬೇಕಾದ ಅನಿವಾರ್ಯತೆಯಿಂದ ತಮ್ಮಲ್ಲಿದ್ದ ಚಿನ್ನ ಅಡವಿಟ್ಟು 2 ಲಕ್ಷ ಹಣ ಹೊಂದಿಸಿ ಅದನ್ನು ಬೈಕ್‍ನ ಸೈಡ್ ಲಾಕರ್‌ನಲ್ಲಿ ಇಟ್ಟುಕೊಂಡು ಬಾಮೈದನೊಂದಿಗೆ ಮನೆಗೆ ತೆರಳುತ್ತಿದ್ದರು.ಮಾರ್ಗ ದಾರಿ ಮಧ್ಯೆ ಬಿರಿಯಾನಿ ತಿನ್ನಲೆಂದು ಬೈಕ್‍ನಿಂದ ಇಬ್ಬರು ಇಳಿದು ಹೋಗಿದ್ದಾರೆ. ಈ ವೇಳೆ ಬೈಕ್ ಲಾಕರ್‌ನಲ್ಲಿದ್ದ ಹಣವನ್ನು ಕೂಡ ಅಲ್ಲೇ ಬಿಟ್ಟು ಹೋಗಿದ್ದು ಬಿರಿಯಾನಿ ತಿಂದು ಬರುವಷ್ಟರಲ್ಲಿ 2 ಲಕ್ಷ ರೂಗಳನ್ನು ಕಳ್ಳರು ಎಗರಿಸಿದ್ದಾರೆ.


ಬಿರಿಯಾನಿ ತಿಂದು ಹನುಮಂತರಾಯ ಬೈಕ್ ಬಳಿ ಬಂದು ಹಣವನ್ನು ಪರಿಶೀಲಿಸಿದಾಗ ಕಳ್ಳತನ ಬೆಳಕಿಗೆ ಬಂದಿದೆ. ಕೂಡಲೇ ಪಕ್ಕದಲ್ಲಿದ್ದ ಅಂಗಡಿಯೊಂದರ ಸಿಸಿಟಿವಿ ಪರಿಶೀಲಿಸಿದಾಗ ಸಾಮಾನ್ಯರಂತೆ ಓಡಾಡಿ, ಹಣ ಕಳ್ಳತನ ಮಾಡಿದ ದೃಶ್ಯ ಸೆರೆಯಾಗಿದೆ. ಈ ಘಟನೆ ಕೆಳ ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ

Join Whatsapp
Exit mobile version