ಕ್ಯಾಶ್‌ಬ್ಯಾಕ್ ಆಫರ್​​ನಿಂದ ಸಾವಿರಾರು ರೂಪಾಯಿ ಕಳೆದುಕೊಂಡ ಹೊಟೇಲ್​ ಮಾಲಿಕ!

Prasthutha|

ಬೆಂಗಳೂರು: ಆನ್‌ಲೈನ್ ಪೇಮೆಂಟ್​ ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್​​ನಿಂದ ಖದೀಮರು ಸಾವಿರಾರು ರೂಪಾಯಿ ದೋಚಿದ್ದಾರೆ.

- Advertisement -

ನಗರದ ದಯಾನಂದ ಲೇಔಟ್‌ನ ರಾಮಮೂರ್ತಿನಗರದ ಬಿರಿಯಾನಿ ಹೋಟೆಲ್‌ ಮಾಲೀಕ ಪ್ಯಾರುಲ್ ಷಾ ವಂಚನೆಗೆ ಒಳಗಾದ ವ್ಯಕ್ತಿ. ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪ್ಯಾರುಲ್​ ಷಾ ತಮ್ಮ ಹೊಟೇಲ್​ ಕೆಲಸದಲ್ಲಿ ಬ್ಯೂಸಿಯಾಗಿದ್ದರು. ಈ ವೇಳೆ ಹೋಟೆಲ್​ಗೆ ಬಂದ ಇಬ್ಬರು ಅಪರಿಚಿತರು ತಾವು ಬ್ಯಾಂಕ್ ಎಕ್ಸಿಕ್ಯೂಟಿವ್‌ ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದಾರೆ.

ನಂತರ ಪ್ಯಾರುಲ್​ ಷಾ ಅವರಿಗೆ ನೀವು ಈ ಆ್ಯಪ್​​ ಮೂಲಕ ಆನ್​​ಲೈನ್​​ ಪೇಮೆಂಟ್​ ಮಾಡಿದರೇ ಪ್ರತಿದಿನ 300 ರೂ. ಕ್ಯಾಶ್​ಬ್ಯಾಕ್​​ ಬರುತ್ತದೆ ಎಂದು ಹೇಳಿದ್ದಾರೆ. ಇದರಿಂದ ಉತ್ಸುಕರಾದ ಪ್ಯಾರುಲ್​ ಷಾ ಅವರು ಅಪರಿಚಿತ ವ್ಯಕ್ತಿಗೆ ತಮ್ಮ ಮೊಬೈಲ್​ ನೀಡಿದ್ದಾರೆ. ನಂತರ ಬ್ಯಾಂಕ್ ಖಾತೆಯ ವಿವರಗಳನ್ನೂ ಸಹ ಅವರಿಗೆ ಹೇಳಿದ್ದಾರೆ ನಂತರ ಈ ಇಬ್ಬರು ಕೆಲ ಕಾಲ ಮೊಬೈಲ್‌ ಬಳಸಿ ಆ್ಯಪ್​ ಇನ್​ಸ್ಟಾಲ್​ ಆಗಿದೆ ಎಂದು ಹೇಳಿ ಮೊಬೈಲ್​ ಮರುಕಳಿಸಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

- Advertisement -

ನಂತರ ಪಾರುಲ್​ ಷಾ ಅವರು ತಮ್ಮ ಬ್ಯಾಂಕ್​ ಖಾತೆಯನ್ನು ಪರಿಶೀಲಿಸಿದಾಗ ತಮ್ಮ ಖಾತೆಯಿಂದ 52 ಸಾವಿರ ರೂ. ವರ್ಗಾವಣೆಗೊಂಡಿರುವುದು ತಿಳಿದಿದೆ. ಇದರಿಂದ ಗಾಬರಿಗೊಂಡ ಮಾಣಿಕ್​ ಷಾ ಅವರು ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Join Whatsapp