Home ಟಾಪ್ ಸುದ್ದಿಗಳು ಬೆಂಗಳೂರು ಉತ್ತರದ ಬಿಜೆಪಿ ಮುಖಂಡ ಹೃದಯಾಘಾತದಿಂದ ಧರ್ಮಸ್ಥಳದಲ್ಲಿ ನಿಧನ

ಬೆಂಗಳೂರು ಉತ್ತರದ ಬಿಜೆಪಿ ಮುಖಂಡ ಹೃದಯಾಘಾತದಿಂದ ಧರ್ಮಸ್ಥಳದಲ್ಲಿ ನಿಧನ

ಬೆಳ್ತಂಗಡಿ : ಬೆಂಗಳೂರು ಉತ್ತರದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ. ನರೇಂದ್ರ ಕುಮಾರ್(45) ಧರ್ಮಸ್ಥಳದಲ್ಲಿ ನಿಧನರಾಗಿದ್ದಾರೆ.

ಬೆಂಗಳೂರಿನ ಯಲಹಂಕ ಮತ್ತು ಬಂಡಿಕೊಡಿಗೆಹಳ್ಳಿಯಲ್ಲಿರುವ ಶ್ರೀ ಜ್ಞಾನಕ್ಷಿ ವಿದ್ಯಾ ಮಂದಿರದ‌ ಮಾಲೀಕ ಹಾಗೂ ಬೆಂಗಳೂರು ಉತ್ತರ ವಲಯದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ಡಾ. ನರೇಂದ್ರ ಕುಮಾರ್  ಬೆಂಗಳೂರಿನಿಂದ ತಮ್ಮ ಶಾಲೆಯ ಶಿಕ್ಷಕಿಯರನ್ನು ಪುತ್ತೂರು ವಿವೇಕಾನಂದ ಕಾಲೇಜಿಗೆ ತರಬೇತಿಗಾಗಿ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳು ಮತ್ತು ಸ್ನೇಹಿರರೊಂದಿಗೆ ಟಿಟಿ ವಾಹನಲ್ಲಿ ಕರೆದುಕೊಂಡು ಬಂದಿದ್ದರು.

ಶಿಕ್ಷಕಿಯರನ್ನು ವಿವೇಕಾನಂದ ಕಾಲೇಜಿಗೆ ಬಿಟ್ಟು ತಮ್ಮ ಪತ್ನಿ‌ ಮಕ್ಕಳು ಸೇರಿ ಒಟ್ಟು ಏಳು ಜನರು ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ದೇವಸ್ಥಾನ ದರ್ಶನ ಪಡೆದು ವಾಪಸ್ ಬೆಂಗಳೂರಿಗೆ ಹೋಗುವುದಾಗಿ ನಿರ್ಧರಿಸಿದ್ದರು. ಇಂದು ಬೆಳಗ್ಗೆ ಏಕಾಏಕಿ ಡಾ.ನರೇಂದ್ರ ಕುಮಾರ್ ಗೆ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ವಾಹನದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮೃತದೇಹವನ್ನು ಆಂಬುಲೆನ್ಸ್ ಮೂಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಶವಪರೀಕ್ಷೆಗೆ ತರಲಾಗಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಸಂದರ್ಶಿನಿ ಮತ್ತು  ಮಕ್ಕಳಾದ ಪ್ರಜ್ವಲ್ (14) ಕಶಿಕಾ(8) ಸಹಿತ ಅಪಾರ ಬಂಧುಗಳು ಮತ್ತು ಹಿತೈಷಿಗಳನ್ನು ಅಗಲಿದ್ದಾರೆ.

Join Whatsapp
Exit mobile version