ಬೆಂಗಳೂರು | ರಾಜ್ಯಮಟ್ಟದ ಅಥ್ಲೆಟಿಕ್ಸ್‌ ಕೂಟಕ್ಕೆ ಚಾಲನೆ

Prasthutha|

ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ​​ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಜಂಟಿಯಾಗಿ ಮೂರು ದಿನಗಳ ಕಾಲ ಆಯೋಜಿಸಿರುವ ಜೂನಿಯರ್ ಮತ್ತು ಸೀನಿಯರ್ ಅಥ್ಲೆಟಿಕ್ಸ್ ಕೂಟಕ್ಕೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.

- Advertisement -

ಕ್ರೀಡಾಕೂಟವನ್ನು ಚಲನಚಿತ್ರ ನಿರ್ಮಾಪಕಿ ಶೈಲಜಾ ವಿಜಯ್ ಕಿರಗಂದೂರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್‌ನ ಕಾರ್ಯದರ್ಶಿ ಎ ರಾಜವೇಲು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕುಮಾರನ್‌ ಸಂಪತ್, ಜಿಲ್ಲಾ ಕಾರ್ಯದರ್ಶಿ ಎಚ್ ಎನ್ ಆನಂದ್ ಕುಮಾರ್, ಜಿಲ್ಲಾ ಕೋಶಾಧಿಕಾರಿ ಚಂದ್ರಮೋಹನ್ ಸೇರಿದಂತೆ ಮತ್ತಿತರರಿದ್ದರು.

ಅಂಡರ್ 14, 16,18, 20, 23 ವಯೋಮಿತಿಯ ಪುರುಷರು ಮತ್ತು ಮಹಿಳೆಯರು ಭಾಗವಹಿಸಲಿದ್ದಾರೆ. ಈ ಕೂಟವು ಕರ್ನಾಟಕ ರಾಜ್ಯ ಜೂನಿಯರ್ ತಂಡಕ್ಕೆ ‘ಆಯ್ಕೆ ಟ್ರಯಲ್ಸ್’ ಆಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಆಗಸ್ಟ್ 26 ರಿಂದ 28ರವರೆಗೆ ಮೂರು ದಿನಗಳ ಕಾಲ ನಡೆಯುವ ಈ ಬಾರಿಯ ಕ್ರೀಡಾಕೂಟದಲ್ಲಿ ಒಟ್ಟು 210 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಒಟ್ಟು ರಾಜ್ಯದ 2000ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕುಮಾರನ್‌ ಸಂಪತ್ ತಿಳಿಸಿದ್ದಾರೆ.

Join Whatsapp