Home ಟಾಪ್ ಸುದ್ದಿಗಳು ಬಂಗಾರಪ್ಪನವರು ಚಿಟಿಕೆ ಹೊಡೆಯೋದ್ರಲ್ಲಿ ಉತ್ತರ ಕೊಟ್ಟಿದ್ರು: ಮಧು ಬಂಗಾರಪ್ಪ

ಬಂಗಾರಪ್ಪನವರು ಚಿಟಿಕೆ ಹೊಡೆಯೋದ್ರಲ್ಲಿ ಉತ್ತರ ಕೊಟ್ಟಿದ್ರು: ಮಧು ಬಂಗಾರಪ್ಪ

ರಾಯಚೂರು: ಸಿದ್ದರಾಮಯ್ಯನವರು ಬಂಗಾರಪ್ಪ ತೆಗೆದುಕೊಂಡ ತೀರ್ಮಾನ ತೆಗೆದುಕೊಂಡರೆ ಅವರ ಜೊತೆ ಇರುತ್ತೇವೆ. ಕಾವೇರಿ ನೀರಿನ ವಿಚಾರದಲ್ಲಿ ಬಂಗಾರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಚಿಟಿಕೆ ಹೊಡೆಯುವುದರಲ್ಲಿ ಉತ್ತರ ಕೊಟ್ಟಿದ್ದರು. ಬಂಗಾರಪ್ಪನವರ ಕಾಲದ ಕಾನೂನು ಬೇರೆ, ಈಗ ಬೇರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.


ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯನವರು ಬಂಗಾರಪ್ಪ ತೆಗೆದುಕೊಂಡ ತೀರ್ಮಾನ ತೆಗೆದುಕೊಂಡರೆ ಅವರ ಜೊತೆ ಇರುತ್ತೇವೆ. ಪ್ರಾಧಿಕಾರ ವಿರುದ್ಧ ಹೋಗಿದ್ದಕ್ಕೆ ಹೈಕೋರ್ಟ್ ನಲ್ಲಿ ಆಗ ನಮಗೆ ಛೀಮಾರಿ ಹಾಕಿದ್ದರು. ಅಷ್ಟರೊಳಗೆ ನಮ್ಮ ತಂದೆಯವರು ಏನೇನು ಮಾಡಬೇಕೋ ಮಾಡಿ ಮುಗಿಸಿದ್ದರು ಎಂದರು.

Join Whatsapp
Exit mobile version