ಬಾಂಗ್ಲಾ ಪ್ರವಾಸ ರದ್ದು: ಟೀಂ ಇಂಡಿಯಾಗೆ ಆತಿಥ್ಯ ವಹಿಸುವುದಾಗಿ BCCIಗೆ ಲಂಕಾ ಮನವಿ

- Advertisement -

ಕೊಲಂಬೊ: ಟಿ20 ಹಾಗೂ ಏಕದಿನ ಕ್ರಿಕೆಟ್‌ ಸರಣಿಯಲ್ಲಿ ಟೀಂ ಇಂಡಿಯಾಗೆ ಆತಿಥ್ಯ ವಹಿಸಲು ಅನುಮತಿ ಕೋರಿ ಶ್ರೀಲಂಕಾ ಕ್ರಿಕೆಟ್‌ ಮಂಡಳಿಯು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮನವಿ ಮಾಡಿದೆ ಎಂದು ವರದಿಯಾಗಿದೆ.

- Advertisement -

ಭಾರತ ಹಾಗೂ ಬಾಂಗ್ಲಾದೇಶ ತಂಡಗಳು, ಇದೇ ವರ್ಷ ಆಗಸ್ಟ್‌ನಲ್ಲಿ ನಿಗದಿತ ಓವರ್‌ಗಳ ಸರಣಿಯಲ್ಲಿ ಮುಖಾಮುಖಿಯಾಗಬೇಕಿತ್ತು. ಆದರೆ, ಬಾಂಗ್ಲಾದೇಶದಲ್ಲಿ ಭದ್ರತೆಗೆ ಆತಂಕವಿರುವ ಕಾರಣ, ಭಾರತ ತಂಡವು ಸರಣಿಯಿಂದ ಹಿಂದೆ ಸರಿದಿದೆ. ಹೀಗಾಗಿ, ಈ ಸರಣಿಯನ್ನು 2026ರ ಸೆಪ್ಟೆಂಬರ್‌ಗೆ ಮುಂದೂಡಲಾಗಿದೆ. ಇದರ ಬೆನ್ನಲ್ಲೇ, ಲಂಕಾ ಮಂಡಳಿಯು ಬಿಸಿಸಿಐಗೆ ಮನವಿ ಮಾಡಿದೆ ಎನ್ನಲಾಗಿದೆ.

ತಲಾ ಮೂರು ಏಕದಿನ ಹಾಗೂ ಟಿ20 ಪಂದ್ಯಗಳನ್ನು ಆಯೋಜಿಸುವುದಾಗಿ ಲಂಕಾ ಮಂಡಳಿ ಹೇಳಿದೆ. ಬಾಂಗ್ಲಾ ವಿರುದ್ಧವೂ ಇಷ್ಟೇ ಪಂದ್ಯಗಳು ನಿಗದಿಯಾಗಿದ್ದವು.

- Advertisement -

ಲಂಕಾ ಮಂಡಳಿಯ ಪ್ರಸ್ತಾವನೆಗೆ ಬಿಸಿಸಿಐ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

- Advertisement -


Must Read

Related Articles