Home ಟಾಪ್ ಸುದ್ದಿಗಳು ಬಂಟ್ವಾಳ: ಅಪ್ರಾಪ್ತ ಬಾಲಕನ ಮೇಲೆ ಸಂಘಪರಿವಾರದಿಂದ ಹಲ್ಲೆ

ಬಂಟ್ವಾಳ: ಅಪ್ರಾಪ್ತ ಬಾಲಕನ ಮೇಲೆ ಸಂಘಪರಿವಾರದಿಂದ ಹಲ್ಲೆ

ಬಂಟ್ವಾಳ: ರಾತ್ರಿ ಕೆಲಸ ಬಿಟ್ಟು ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕನ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ  ಮಾಡಿದ ಘಟನೆ ಮಾರಿಪಳ್ಳದ ಕಡೆಗೋಳಿ ಬಳಿ ನಡೆದಿದೆ.

ತುಂಬೆ ರೊಟ್ಟಿಗುಡ್ಡೆ ನಿವಾಸಿ ನಫೀಸ್ (17) ಹಲ್ಲೆಗೊಳಗಾದ ಯುವಕ ಎಂದು ತಿಳಿದು ಬಂದಿದೆ.

ನಫೀಸ್ ಕಳೆದ ರಾತ್ರಿ ಕೆಲಸ ಬಿಟ್ಟು ಮನೆಗೆ ಮರಳುತ್ತಿದ್ದ ವೇಳೆ ಕಡೆಗೋಳಿ ಬಳಿ ತಲುಪಿದಾಗ ಮೊಬೈಲ್ ರಿಂಗಣಿಸಿದೆ. ಈ ವೇಳೆ ಬೈಕ್ ನಿಲ್ಲಿಸಿ ಮಾತನಾಡುತ್ತಿದ್ದಾಗ ಸಂಘಪರಿವಾರದ ಮೂವರು ಕಾರ್ಯಕರ್ತರು ಆಗಮಿಸಿ ಏಕಾಏಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ನಫೀಸ್ ನನ್ನು ಸ್ಥಳೀಯರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

 ಬಂಟ್ವಾಳ ಗ್ರಾಮಾಂತರ ಪೊಲೀಸ್ ಸಿಬ್ಬಂದಿ ಆಸ್ಪತ್ರೆಗೆ ಆಗಮಿಸಿ ಯುವಕನಿಂದ ಹೇಳಿಕೆ ಪಡೆದಿದ್ದು ಪ್ರಕರಣ ದಾಖಲಿಸುವ ಭರವಸೆ ನೀಡಿದ್ದಾರೆ.

Join Whatsapp
Exit mobile version