ಬಂಟ್ವಾಳ | ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ: ಕೆಲಹೊತ್ತು ಸಂಚಾರ ಸ್ಥಗಿತ

Prasthutha|


ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದು, ಕೆಲಹೊತ್ತು ಸಂಚಾರ ಸ್ಥಗಿತವಾದ ಘಟನೆ ತಾಲೂಕಿನ ಸೂರಿಕುಮೇರು ಎಂಬಲ್ಲಿ ನಡೆದಿದೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆ ಬದಿ ಅಗೆದಿದ್ದ ಗುಡ್ಡ ಕುಸಿತಗೊಂಡು ಮಣ್ಣು ರಾಷ್ಟ್ರೀಯ ಹೆದ್ದಾರಿಗೆ ಬಿದ್ದಿದೆ. ಇದರಿಂದ ವಾಹನಗಳ ಸಂಚಾರ ಕೆಲವು ಹೊತ್ತು ಸ್ಥಗಿತಗೊಂಡವು.
ಯಂತ್ರದ ಮೂಲಕ ರಸ್ತೆಯಿಂದ ಮಣ್ಣು ತೆರವುಗೊಳಿಸಲಾಗುತ್ತಿದೆ.

Join Whatsapp