Home ಟಾಪ್ ಸುದ್ದಿಗಳು ಬಂಟ್ವಾಳ | ಚೂರಿ ಇರಿತ ಪ್ರಕರಣ: ಮೂವರ ಬಂಧನ

ಬಂಟ್ವಾಳ | ಚೂರಿ ಇರಿತ ಪ್ರಕರಣ: ಮೂವರ ಬಂಧನ

ಬಂಟ್ವಾಳ: ಆ. 4ರಂದು ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಎರಡು ತಂಡಗಳ ಹೊಡೆದಾಟ ಹಾಗೂ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಶ್ವಥ್, ಶರಣ್ ಹಾಗೂ ವಸಂತ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಉಳಿದ ಆರೋಪಿಗಳಿಗಾಗಿ ಬಂಟ್ವಾಳ ನಗರ ಇನ್ಸ್ಪೆಕ್ಟರ್ ಅನಂತ ಪದ್ಮನಾಭ, ಪಿಎಸ್ ಐ ರಾಮಕೃಷ್ಣ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ.

ಆರೋಪಿಗಳಿಂದ ಹಲ್ಲೆ ಹಾಗೂ ಚೂರಿ ಇರಿತಕ್ಕೊಳಗಾಗಿ ಗಾಯಗೊಂಡಿರುವ ಹರೀಶ ಪೂಜಾರಿ, ವಿನೀತ್ ಹಾಗೂ ಪೃಥ್ವಿರಾಜ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp
Exit mobile version