Home ಕರಾವಳಿ ಬಂಟ್ವಾಳ | ಗುಡ್ಡ ಕುಸಿತದಿಂದ ಮೃತಪಟ್ಟ ಮಹಿಳೆಯ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಕುಟುಂಬಕ್ಕೆ...

ಬಂಟ್ವಾಳ | ಗುಡ್ಡ ಕುಸಿತದಿಂದ ಮೃತಪಟ್ಟ ಮಹಿಳೆಯ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಕುಟುಂಬಕ್ಕೆ ಸಾಂತ್ವನ

ಬಂಟ್ವಾಳ: ನಂದಾವರ ಗುಂಪು ಮನೆ ಎಂಬಲ್ಲಿ ಗುಡ್ಡ ಜರಿದು ಓರ್ವ ಮಹಿಳೆ ಮೃತಪಟ್ಟ ಘಟನೆ ನಡೆದ ಸ್ಥಳಕ್ಕೆ ಶನಿವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರಕಾರದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲಾಗಿದ್ದು, ರಿಪೇರಿಗೆ ಕೂಡ ಪರಿಹಾರ ಕಲ್ಪಿಸುವ ಬಗ್ಗೆ ಭರವಸೆ ನೀಡಿದರು.

ಘಟನೆಯಲ್ಲಿ ಝರಿನಾ ಮೃತಪಟ್ಟಿದ್ದು, ಇವರ ಮಗಳು ಸಫಾ ಅವರು ಮಂಗಳೂರು ತೇಜಸ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವಳ ಆಸ್ಪತ್ರೆಯ ಚಿಕಿತ್ಸೆ ಯ ಸಂಪೂರ್ಣ ವೆಚ್ಚವನ್ನು ಸರಕಾರದಿಂದ ಭರಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಯವರಿಗೆ ಸೂಚನೆ ನೀಡಿದ್ದೇನೆ. ಘಟನೆ ನಡೆದ ಪ್ರದೇಶದಲ್ಲಿ ಇನ್ನೂ ಹಲವಾರು ಮನೆಗಳು ಅಪಾಯದಲ್ಲಿದ್ದು ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದೇನೆ ಎಂದರು.

Join Whatsapp
Exit mobile version