ಬಂಟ್ವಾಳ: ಮೂವರ ಮೇಲೆ ಹೆಜ್ಜೇನು ದಾಳಿ; ಓರ್ವ ಗಂಭೀರ

Prasthutha|

ಬಂಟ್ವಾಳ: ಮೂವರು ವ್ಯಕ್ತಿಗಳಿಗೆ ಹೆಜ್ಜೇನು ದಾಳಿ ಮಾಡಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕಲ್ಪನೆ ಎಂಬಲ್ಲಿ ನಡೆದಿದೆ.

- Advertisement -

ಕಲ್ಪನೆ ನಿವಾಸಿ ಪೂವಪ್ಪ (61) ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳಿದಂತೆ ಮಹೇಶ್ ಮತ್ತು ಗೋಪಾಲ್ ಇಬ್ಬರು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Join Whatsapp