ಬೆಳ್ಳಂಬೆಳಗ್ಗೆ ಬಸ್ ನಿಲ್ದಾಣದಲ್ಲಿ ಪೊಲೀಸ್ ಪೇದೆ ಮಗನ ಬರ್ಬರ ಕೊಲೆ

Prasthutha|

ಕಲಬುರಗಿ: ಬಸ್ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ್ ಪೇದೆಯೊಬ್ಬರ ಮಗನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

- Advertisement -


ವಿದ್ಯಾನಗರ ನಿವಾಸಿ, 27 ವರ್ಷದ ಅಭಿಷೇಕ್ ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಈತನ ತಂದೆ ಚಂದ್ರಕಾಂತ ಪೊಲೀಸ್ ಪೇದೆಯಾಗಿದ್ದಾರೆ.


ಅಭಿಷೇಕ್ ಎಂದಿನಂತೆ ಗುರುವಾರ ಜಿಮ್ ಗೆ ಹೋಗುವುದಾಗಿ ಮನೆಯಿಂದ ಬೈಕ್ ತೆಗೆದುಕೊಂಡು ಬಂದಿದ್ದಾನೆ. ಈ ವೇಳೆ ಏಳೆಂಟು ಜನರ ದುಷ್ಕರ್ಮಿಗಳ ತಂಡ ಆತನನ್ನು ಬೆನ್ನಟ್ಟಿದೆ. ಮುಖ್ಯರಸ್ತೆಯಿಂದಲೇ ದುಷ್ಕರ್ಮಿಗಳು ಬೆನ್ನಟ್ಟಿದ್ದರಿಂದ ಬಸ್ ನಿಲ್ದಾಣದೊಳಗೆ ಅಭಿಷೇಕ್ ಓಡಿ ಬಂದಿದ್ದಾನೆ.

- Advertisement -


ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಎಸಿಪಿ ಅಂಶಕುಮಾರ, ಇನ್ ಸ್ಪೆಕ್ಟರ್ ಪಂಡಿತ ಸಗರ ಹಾಗೂ ಸಿಬ್ಬಂದಿ ಬೇಟಿ ನೀಡಿದರು. ಅಶೋಕ್ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp