SSLC ಪಾಸಾದ ಖುಷಿಯಲ್ಲಿದ್ದ ಬಾಲಕಿಯ ಬರ್ಬರ ಹತ್ಯೆ

Prasthutha|

ಕೊಡಗು: ಎಸ್‌ಎಸ್‌ಎಲ್‌ಸಿ ಪಾಸಾದ ಖುಷಿಯಲ್ಲಿದ್ದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ಸೂರ್ಲಬಿಯಲ್ಲಿ ನಡೆದಿದೆ.

- Advertisement -

ಬೆಳಗ್ಗೆಯಷ್ಟೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದ ಖುಷಿಯಲ್ಲಿದ್ದ ಬಾಲಕಿಯನ್ನು ಖುಷಿ ಮಾಸುವ ಮುನ್ನವೇ ಹತ್ಯೆ ಮಾಡಲಾಗಿದೆ.

ಅಪ್ರಾಪ್ತ ಬಾಲಕಿಯನ್ನು ವಿವಾಹ ಮಾಡುವದಕ್ಕೆ ಪೋಷಕರು ಮುಂದಾಗಿದ್ದು, ಯುವಕನೊಂದಿಗೆ ಎಂಗೇಜ್ಮೆಂಟ್ ಮಾಡುವ ವೇಳೆ ಸೋಮವಾರಪೇಟೆ ಪೊಲೀಸರು ತಡೆಯೊಡ್ಡಿದ್ದರು. ಬಾಲ್ಯವಿವಾಹ ಅಪರಾಧ ಈ ಹಿನ್ನೆಲೆ ಬಾಲಕಿ ವಯಸ್ಕಳಾಗುವವರೆಗೆ ಮದುವೆ ಮಾಡುವಂತಿಲ್ಲ ಎಂದು ನಿಶ್ಚಿತಾರ್ಥ ನಿಲ್ಲಿಸಿದ್ದರು. ಆದರೆ ಅಷ್ಟರಲ್ಲಿ ಮದುವೆಯಾಗಬೇಕಿದ್ದ ಯುವಕನೇ ಅಪ್ರಾಪ್ತ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

Join Whatsapp