ಬಾರ್’ನಲ್ಲಿ ಗಲಾಟೆ: ಓರ್ವನ ಕೊಲೆ

Prasthutha|

ಶಿವಮೊಗ್ಗ: ಬಾರ್’ನಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

- Advertisement -


ಸಚಿನ್ (27) ಕೊಲೆಯಾದ ಯುವಕನಾಗಿದ್ದು, ಈತ ಬಾರ್ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದನು. ಶಿವಮೊಗ್ಗ ತಾಲೂಕಿನ ಆಯನೂರಿನ ನವರತ್ನ ಬಾರ್ ನಲ್ಲಿ ಈ ಗಲಾಟೆ ನಡೆದಿದೆ. ನಿರಂಜನ, ಸತೀಶ್ ಹಾಗೂ ಅಶೋಕ್ ನಾಯ್ಕ್ ಕೊಲೆ ಮಾಡಿದ ಆರೋಪಿಗಳು.


ಈ ಹಿಂದೆ ಹಣ ನೀಡದೇ ಮದ್ಯ ಖರೀದಿಸಿದ್ದ ಆರೋಪಿಗಳು. ಹೀಗಾಗಿ ಬಾರ್ ಬಳಿ ಬಂದಾಗ ಕ್ಯಾಶಿಯರ್ ಹಣ ಕೇಳಿದ್ದಾರೆ. ಎಲ್ಲಾ ಜನರ ಎದುರು ಹಣ ಕೇಳುತ್ತೀಯಾ ಎಂದು ಗಲಾಟೆ ಮಾಡಿದ್ದರು. ಬಳಿಕ ಮೂವರು ಆರೋಪಿಗಳು ಭಾನುವಾರ ರಾತ್ರಿ 10 ಗಂಟೆಗೆ ಬಾರ್ ಗೆ ಕುಡಿಯಲು ಬಂದಿದ್ದರು.

- Advertisement -


ರಾತ್ರಿ 11.30 ಆದರೂ ಆರೋಪಿಗಳು ಮದ್ಯ ಸೇವಿಸುತ್ತಲೇ ಇದ್ದರು. ಈ ವೇಳೆ ಸಚಿನ್, 11.30 ಆಯ್ತು ಬಂದ್ ಮಾಡ್ತೇವೆ ಹೊರಡಿ ಎಂದು ಹೇಳಿದ್ದಾರೆ. ಆಗ ನಮ್ದು ಇನ್ನು ಕುಡಿದು ಮುಗಿದಿಲ್ಲ, ನಾವು ಹೋಗಲ್ಲ ಏನ್ ಮಾಡ್ತೀಯಾ ಅಂತಾ ಗಲಾಟೆ ಮಾಡಿದ್ದಾರೆ. ಜಗಳ ತಾರಕಕ್ಕೇರಿ ಸಚಿನ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಕೂಡಲೇ ಗಾಯಾಳುವನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಬೇರೆಡೆ ಶಿಫ್ಟ್ ಮಾಡುವಾಗಲೇ ಸಚಿನ್ ಮೃತಪಟ್ಟಿದ್ದಾರೆ.
ಘಟನೆ ಕುರಿತು ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp