ಸ್ವಾಮೀಜಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ| ಭಕ್ತರಲ್ಲಿ ಆತಂಕ

Prasthutha|

ಬೆಂಗಳೂರು: ಸ್ವಾಮೀಜಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಭಕ್ತರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ರಾಮನಗರ ಜಿಲ್ಲೆಯ ಮಾಗಡಿಯ ಸೋಲೂರು ಹೋಬಳಿ ಚಿಲುಮೆ ಮಠದ ಬಸವಲಿಂಗ ಶ್ರೀಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

- Advertisement -


ಸ್ವಾಮೀಜಿಯ ಸಾವಿನ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಂತಿಮ ದರ್ಶನ ಪಡೆಯಲು ವಿವಿಧ ಮಠಾಧೀಶರು ಮತ್ತು ಭಕ್ತರ ದಂಡೇ ಆಗಮಿಸಿದೆ.

ಮಠದ ಆವರಣದಲ್ಲಿ ನೇಣು ಬಿಗಿದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಸ್ವಾಮೀಜಿಗಳೇ ಆತ್ಮಹತ್ಯೆಗೆ ಶರಣಾದ್ರಾ ಅಥವಾ ಕೊಲೆ ನಡೆದಿದೆಯಾ ಎಂಬುದರ ಕುರಿತು ಅನುಮಾನಗಳು ವ್ಯಕ್ತವಾಗಿವೆ.

- Advertisement -

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದು, ಆತ್ಮಹತ್ಯೆಯೋ, ಕೊಲೆಯೋ ಎಂದು ಈವರೆಗೂ ಸ್ಪಷ್ಟತೆ ಸಿಕ್ಕಿಲ್ಲ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp