ಕಾವೇರುತ್ತಿರುವ ಉತ್ತರ ಪ್ರದೇಶ ಚುನಾವಣಾ: ಚಂದ್ರಶೇಖರ್ ಆಝಾದ್ ರೊಂದಿಗೆ ವೇದಿಕೆ ಹಂಚಿಕೊಂಡ ಎಸ್ ಪಿ ಮುಖಂಡೆ ವಜಾ

Prasthutha|

ಮುಝಫರ್ ನಗರ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಸಮಾಜವಾದಿ ಪಕ್ಷದ ಮಾಜಿ ಸಚಿವೆ ಉಮಾ ಕಿರಣ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.

- Advertisement -

ಪಕ್ಷ ವಿರೋಧಿ ಚಟುವಟಿಕೆಗಾಗಿ ಅವರನ್ನು ಉಚ್ಚಾಟಿಸಲಾಗಿದೆ ಎಂದು ಮುಝಫರ್ ನಗರ ಜಿಲ್ಲಾಧ್ಯಕ್ಷ ಪ್ರಮೋದ್ ತ್ಯಾಗಿ ತಿಳಿಸಿದ್ದಾರೆ.
ಉಮಾ ಕಿರಣ ಅವರಿ ಪುರ್ಕಾಜಿ ಕ್ಷೇತ್ರದಿಂದ ಪಕ್ಷದ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದರು ಮತ್ತು ಟಿಕೆಟ್ ನೀಡದ್ದಕ್ಕಾಗಿ ಬೇಸರಗೊಂಡಿದ್ದರು ಎಂದು ತ್ಯಾಗಿ ತಿಳಿಸಿದ್ದಾರೆ.

ಈ ನಡುವೆ ಚಂದ್ರಶೇಖರ್ ಆಝಾದ್ ನೇತೃತ್ವದ ಆಝಾದ್ ಭೀಮ್ ಆರ್ಮಿ ಪಕ್ಷದಿಂದ ಟಿಕೆಟ್ ನೀಡಲಾಗಿದೆ ಮತ್ತು ಆಝಾದ್ ರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದರಿಂದ ಅವರನ್ನು ಪಕ್ಷದಿಂದ ಉಚ್ಚಾಟಿಸಲು ಪ್ರಮುಖ ಕಾರಣ ಎಂದು ಹೇಳಲಾಗಿದೆ.

Join Whatsapp