ಕಾವೇರುತ್ತಿರುವ ಉತ್ತರ ಪ್ರದೇಶ ಚುನಾವಣೆ । ಸ್ಪರ್ಧಾ ಕಣದಿಂದ ಹಿಂದೆ ಸರಿದ ಹತ್ರಾಸ್ ಸಂತ್ರಸ್ತ ಕುಟುಂಬ

Prasthutha|

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಕಣದಿಂದ ಹತ್ರಾಸ್ ಸಂತ್ರಸ್ತೆಯ ಕುಟುಂಬ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದೆ.

- Advertisement -

ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ನಮ್ಮನ್ನು ಯಾರೂ ಸಂಪರ್ಕಿಸಿಲ್ಲ. ಅನ್ಯಾಯಕ್ಕೊಳಗಾದ ಅಕ್ಕಳಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಉದ್ದೇಶ. ಈ ಬಗ್ಗೆ ನಮ್ಮನ್ನು ಯಾರಾದರೂ ಸಂಪರ್ಕಿಸ ಬಯಸಿದರೆ ಅವರನ್ನು ಸ್ವಾಗತಿಸಲಾಗುವುದು. ಆದರೆ ಇಲ್ಲಿಯ ತನಕ ಯಾರೂ ಕೂಡ ನಮ್ಮನ್ನು ಸಂಪರ್ಕಿಸಿಲ್ಲ ಎಂದು ಸಂತ್ರಸ್ತೆಯ ಕಿರಿಯ ಸಹೋದರ ತಿಳಿಸಿದ್ದಾರೆ.

ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ತಾಯಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದ ತೀರ್ಪು ಪ್ರಕಟವಾಗಿದ್ದು, ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ತಿಳಿಸಿದರು.

- Advertisement -

ಉನ್ನಾವೊ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂಬ ವರದಿಗಳ ಮಧ್ಯೆ ಹತ್ರಾಸ್ ಸಂತ್ರಸ್ತೆಯ ಕುಟುಂಬದಿಂದ ಈ ಪ್ರತಿಕ್ರಿಯೆ ಬಂದಿದೆ.

Join Whatsapp