19 ಸಾವಿರ ಅಲ್ಪ ಸಂಖ್ಯಾತ ಮತದಾರರನ್ನು ಕೈ ಬಿಟ್ಟ ಬಿಬಿಎಂಪಿ

Prasthutha|

ಬೆಂಗಳೂರು ಬಿಬಿಎಂಪಿ ವ್ಯಾಪ್ತಿ ಸೇರಿ ರಾಜ್ಯದೆಲ್ಲಡೆ ಬಿಜೆಪಿ ಸರ್ಕಾರ ಸೋಲಿನ ಬೀತಿಯಿಂದ ಅಲ್ಪ ಸಂಖ್ಯಾತರ ಮತದಾರರನ್ನು ಮತಪಟ್ಟಿಯಿಂದ ತೆಗೆದು ಹಾಕುವ ಮೂಲಕ ನೀಚ ರಾಜಕಾರಣ ನಡೆಸುತ್ತಿದೆ ಎಂದು ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ರಾಜ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದರು.

- Advertisement -

ಬೆಂಗಳೂರಿನ ರೇಸ್ ಕೋರ್ಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಶಿವಾಜಿನಗರವೊಂದರ ವಿಧಾನ ಸಭಾ ಕ್ಷೇತ್ರದಲ್ಲಿ ಸುಮಾರು 19ಸಾವಿರ ಮತದಾರರನ್ನು ಕೈಬಿಡುವ ಕೃತ್ಯವನ್ನು ಬಿಬಿಎಂಪಿ ಅಧಿಕಾರಿಗಳು ಹಾಗೂ ಖಾಸಗಿ ಎನ್ ಜಿ ಎ ಸಂಸ್ಥೆ ಮಾಡಿದೆ. ಇಂತಹ ಕಾರ್ಯಕ್ಕೆ ಸರ್ಕಾರದ ಬೆಂಬಲವಿದೆ. ಈ ಕುರಿತಂತೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಪಕ್ಷದ ಹಿರಿಯ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚುನಾವಣಾ ಆಯೋಗ ಕ್ಕೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದರು.

Join Whatsapp