ಬಿಬಿಎಂಪಿ ಗುತ್ತಿಗೆದಾರರಿಂದ ದೂರು: ರಾಜ್ಯಪಾಲರನ್ನು ಭೇಟಿಯಾದ ಬಿಬಿಎಂಪಿ ಮುಖ್ಯ ಆಯುಕ್ತ

Prasthutha|

ಬೆಂಗಳೂರು: ಕಾಮಗಾರಿ ಬಿಲ್ ಪಾವತಿ ವಿಳಂಬ ವಿಚಾರವಾಗಿ ಬಿಬಿಎಂಪಿ ಗುತ್ತಿಗೆದಾರರು ನೀಡಿದ ದೂರಿನ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಆಯುಕ್ತ ತುಷಾರ್ ಗಿರಿನಾಥ್ ಬಾಕಿ ಇರುವ ಬಿಲ್​ಗಳ ಮಾಹಿತಿ ನೀಡಿದರು.

- Advertisement -

ಸರ್ಕಾರದ ವ್ಯಾಪ್ತಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಸಂಪೂರ್ಣ ಕಾಮಗಾರಿಗಳ ಬಗ್ಗೆ ಬಿಬಿಎಂಪಿ ಆಯುಕ್ತರು ರಾಜ್ಯಪಾಲರಿಗೆ ಮಾಹಿತಿ ನೀಡಿದರು. ಸರ್ಕಾರಿ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ 5000 ಸಾವಿರ ಕೋಟಿ ಬಿಲ್​ ಬಾಕಿ ಇದ್ದು, ಸದ್ಯ 670 ಕೋಟಿ ಬಿಬಿಎಂಪಿ ಖಾತೆಗೆ ಸರ್ಕಾರ ವರ್ಗಾವಣೆ ಮಾಡಿದೆ.

ಬಿಲ್ ಪಾವತಿ ದೂರಿನ ಸಂಬಂಧ ಬಿಬಿಎಂಪಿ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಸ್ಪಷ್ಟನೆ ಪಡೆಯಲು ರಾಜ್ಯಪಾಲರು ಮುಂದಾಗಿದ್ದರು. ಅದರಂತೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಮೂಲಕ ಭೇಟಿಗೆ ಸೂಚನೆ ನೀಡಿದ್ದರು. ಅಲ್ಲದೆ, ಕಮಿಷನ್ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಅಧಿಕಾರಿಗಳ ಜೊತೆ ಚರ್ಚೆಗೆ ಮುಂದಾಗಿದ್ದಾರೆ.

- Advertisement -

ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿ ಸಂಬಂಧ ಗುತ್ತಿಗೆದಾರರಿಗೆ ಬಿಲ್ ಪಾವತಿ ಬಾಕಿ ಇರಿಸಲಾಗಿದೆ. ಇದನ್ನು ಬಿಡುಗಡೆ ಮಾಡುವಂತೆ ಗುತ್ತಿಗೆದಾರರು ಆಗ್ರಹಿಸಿದ್ದಲ್ಲದೆ, ರಾಜ್ಯಪಾಲರಿಗೆ ದೂರು ಕೂಡ ನೀಡಿದ್ದರು. ಡಿಕೆ ಶಿವಕುಮಾರ್ ಅವರು 10-15 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘವು ಟ್ವೀಟ್ ಮೂಲಕ ಗಂಭೀರ ಆರೋಪ ಮಾಡಿತ್ತು.

Join Whatsapp