ಬಿಬಿಎಂಪಿ ಕಸದ ಲಾರಿ-ಬೈಕ್ ಅಪಘಾತ: ಚಾಲಕನ ಬಂಧನ

Prasthutha|

ಬೆಂಗಳೂರು: ಲಾರಿ-ಬೈಕ್ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿಂತೆ ಬಿಬಿಎಂಪಿ ಕಸದ ಲಾರಿ ಚಾಲಕನನ್ನು ಹಲಸೂರು ಗೇಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ.

- Advertisement -


ಶಿವಶಂಕರ್ (38) ಬಂಧಿತ ಲಾರಿ ಚಾಲಕ. ಅಪಘಾತದ ಬಳಿಕ ಚಾಲಕ ಶಿವಶಂಕರ್ ಪರಾರಿಯಾಗಿದ್ದನು. ಸದ್ಯ ಪೊಲೀಸರು ಚಾಲಕ ಶಿವಶಂಕರ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಚಾಲಕ ಶಿವಶಂಕರ್ ರಕ್ತ ಮಾದರಿಯನ್ನು ಸಂಗ್ರಹಿಸಿ ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಲಾಗಿದೆ. ಕುಡಿದು ವಾಹನ ಚಾಲನೆ ಮಾಡಿರುವ ಬಗ್ಗೆ ಪರಿಶೀಲನೆ ನಡೆಯಲಿದೆ.



Join Whatsapp