ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ BBMP ಆರೋಗ್ಯಾಧಿಕಾರಿ

Prasthutha|

ಬೆಂಗಳೂರು: 50 ಸಾವಿರ ರೂ. ಲಂಚ ಪಡೆಯುವಾಗ ಬಿಬಿಎಂಪಿ ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದಿದ್ದಾರೆ.

- Advertisement -

ಸೊಳ್ಳೆ ನಿಯಂತ್ರಣಕ್ಕಾಗಿ ಶ್ರೀನಿವಾಸ್ ಎಂಬುವರು ಗುತ್ತಿಗೆ ಪಡೆದಿದ್ದರು. ಇದಕ್ಕಾಗಿ ಸಿ.ವಿ.ರಾಮನ್​ನಗರದ ಬಿಬಿಎಂಪಿ ಆರೋಗ್ಯಾಧಿಕಾರಿ ವಿ.ಶಿವೇಗೌಡ 80 ಸಾವಿರ ಲಂಚ ಕೇಳಿದ್ದರು.

ಮುಂಗಡವಾಗಿ ಈಗಾಗಲೇ 30 ಸಾವಿರ ಲಂಚ ಪಡೆದಿದ್ದು, ಇನ್ನುಳಿದ 50 ಸಾವಿರ ರೂ. ಪಡೆಯುವ ವೇಳೆ ಹಲಸೂರು ಕಚೇರಿಯಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದಿದ್ದಾರೆ.

- Advertisement -

ಇತ್ತೀಚೆಗೆ ಲಂಚ ಸ್ವೀಕರಿಸುವಾಗ ಬೆಸ್ಕಾಂ ಸಹಾಯಕ ಇಂಜಿನಿಯರ್​ ಲೋಕಾಯುಕ್ತ ಬಲೆಗೆ ಬಿದಿದ್ದರು. ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಬೆಸ್ಕಾಂ ಸಹಾಯಕ ಇಂಜಿನಿಯರ್​ ರಾಜೇಶ್ ವಿರುದ್ಧ ಎಫ್​ಐಆರ್​ ಕೂಡ ದಾಖಲು ಮಾಡಲಾಗಿತ್ತು.

Join Whatsapp